Advertisement

Agri: ಸಾವಯವ ಸಿರಿಧಾನ್ಯ ಮೇಳ ರೈತ ಸ್ನೇಹಿ ಆಗಿರಲಿ: ಸಚಿವ ಎನ್‌. ಚಲುವರಾಯಸ್ವಾಮಿ 

11:24 PM Dec 20, 2023 | Team Udayavani |

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜ. 5ರಿಂದ 7 ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ರೈತ ಸ್ನೇಹಿ ಆಗಿರಬೇಕು. ಈ ನಿಟ್ಟಿನಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಶೇಷಾದ್ರಿ ರಸ್ತೆಯ ಕೃಷಿ ಆಯುಕ್ತ ಕಚೇರಿ ಸಭಾಂಗಣದಲ್ಲಿ ನಡೆದ ಮೇಳದ ಪೂರ್ವಭಾವಿ ಸಿದ್ಧತೆ ಪರಿಶೀಲನ ಸಭೆಯಲ್ಲಿ ಮಾತನಾಡಿ, ಸಿರಿಧಾನ್ಯಗಳ ಕೃಷಿ, ಅದರ ಉತ್ಪನ್ನಗಳ ಮೌಲ್ಯವರ್ಧನೆ, ವಿಭಿನ್ನ ಖಾದ್ಯ ತಯಾರಿಕೆ ಬಗ್ಗೆ ರೈತರಿಗೆ ಮಾಹಿತಿಗೆ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣ ಏರ್ಪಡಿಸಲು ತಿಳಿಸಿದರು.

ಮೇಳದ ಉದ್ಘಾಟನೆ, ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯದ ಸಚಿವರು ಪಾಲ್ಗೊಳ್ಳಲಿದ್ದು, ಶಿಷ್ಟಾಚಾರದಲ್ಲಿ ಯಾವುದೇ ಲೋಪ ಉಂಟಾಗದಂತೆ ಗಮನಹರಿಸುವಂತೆ ತಿಳಿಸಿದರು.

ಕೃಷಿ ಇಲಾಖೆ ಕಾರ್ಯದರ್ಶಿ ವಿ. ಅನ್ಶುಕುಮಾರ್‌, ಕೃಷಿ ಆಯುಕ್ತ ವೈ.ಎಸ್‌. ಪಾಟೀಲ್‌, ನಿರ್ದೇಶಕ ಡಾ| ಜಿ.ಟಿ. ಪುತ್ರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next