Advertisement

ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲಿ: ರವಿ

11:25 PM Dec 21, 2019 | Lakshmi GovindaRaj |

ಚಿಕ್ಕಮಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಯತಿಕುಲದ ಶ್ರೇಷ್ಠರಾದ ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಸಚಿವ ಸಿ.ಟಿ.ರವಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ಹೇಳಲಾಗುತ್ತಿದೆ.

Advertisement

ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುವುದಷ್ಟೇ ನಮ್ಮ ಕೆಲಸ. ವೈದ್ಯರು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದಾರೆ ಎಂದರು. ಕೃಷ್ಣನ ಆರಾಧಕರಾದ ಪೇಜಾವರ ಶ್ರೀಗಳು ಎಲ್ಲ ಹಿಂದೂಗಳು ಸೋದರರು. ಅವರಿಗೆ ಜಾತಿ ಇಲ್ಲ.

ಯಾವ ಹಿಂದುವೂ ಅಸ್ಪೃಶ್ಯ ಅಲ್ಲ ಎಂದು ಹೇಳಿದ್ದಷ್ಟೇ ಅಲ್ಲದೆ, ಅದನ್ನು ಮಾಡಿ ತೋರಿಸಿದವರು. ಅವರ ಮಾರ್ಗದರ್ಶನ ಸಮಾಜಕ್ಕೆ ಇನ್ನೂ ಬೇಕಿದೆ. ಅವರು ಮತ್ತಷ್ಟು ಕಾಲ ಇದ್ದು ಸಮಾಜಕ್ಕೆ ದಾರಿ ತೋರಿಸಬೇಕು. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next