Advertisement

ಜನತೆ ಲೋಕಾಯುಕ್ತದ ಅರಿವು ಹೊಂದಲಿ: ಸುಶಾಂತ ಚೌಗಲೆ

12:30 PM Jun 24, 2022 | Team Udayavani |

ಕಲಬುರಗಿ: ಸುಗಮ ಆಡಳಿತ ಹಾಗೂ ಪಾರದರ್ಶಕ ಆಡಳಿತಕ್ಕೆ ಸಾರ್ವಜನಿಕರು ಲೋಕಾಯುಕ್ತ ಕಾಯ್ದೆ ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಂ. ಚೌಗಲೆ ಹೇಳಿದರು.

Advertisement

ಗುರುವಾರ ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ಕಲಬುರಗಿ ಹಾಗೂ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಲೋಕಾಯುಕ್ತ ಕಾಯ್ದೆ ಅರಿವು ಮತ್ತು ಸಾರ್ವಜನಿಕ ಕುಂದು-ಕೊರತೆಗಳ ಅರ್ಜಿ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಎಲ್ಲ ಕಾನೂನು ಅರಿವು ಹೊಂದಿದ್ದಲ್ಲಿ ಯಾವುದೇ ಘರ್ಷಣೆ ಎದುರಾಗುವುದಿಲ್ಲ. ಮುಖ್ಯವಾಗಿ ನಮ್ಮ ಕಾರ್ಯಗಳೇನು ಎಂಬುದು ಮನವರಿಕೆಯಾಗುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಸತೀಶ ಚಿಟಗುಬ್ಬಿ, ಉಪಾಧೀಕ್ಷಕ ಸಿದ್ಧಲಿಂಗಪ್ಪಗೌಡ ಪಾಟೀಲ ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಧಿಖಾಧಿಕಾರಿಗೆ ಆದಷ್ಟು ಬೇಗನೆ ಪರಿಹರಿಸಲು ಸೂಚನೆ ನೀಡಿದರು. ತಹಶೀಲ್ದಾರ್‌ ಪ್ರಕಾಶ ಕುದುರೆ ಹಾಗೂ ಇನ್ನಿತರ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next