Advertisement

Pralhad Joshi ಹೇಳಿಕೆ ವಾಪಸ್‌ ಪಡೆಯಲಿ: ಸಂತೋಷ ಲಾಡ್‌

07:55 PM Jan 09, 2024 | Team Udayavani |

ಧಾರವಾಡ: ಜನಾಭಿಪ್ರಾಯದ ಮೇರೆಗೆ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ತಾಲಿಬಾನ್‌, ಅಫ್ಘಾನಿಸ್ತಾನ್‌ ಆಡಳಿತಕ್ಕೆ ಹೋಲಿಕೆ ಮಾಡಿ ಟೀಕೆ ಮಾಡುವುದು ಸರಿಯಲ್ಲ. ಕೂಡಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಮ್ಮ ಹೇಳಿಕೆ ವಾಪಸ್‌ ಪಡೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಆಗ್ರಹಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮಾ ದಾಳಿ ಸಂದರ್ಭದಲ್ಲಿ 300 ಕೆಜಿ ಆರ್‌ಡಿಎಕ್ಸ್‌ ದೇಶದೊಳಗೆ ಹೇಗೆ ಬಂದಿದೆ ಎಂಬುದರ ಬಗ್ಗೆ ಅವರು ಮೊದಲು ಸ್ಪಷ್ಟೀಕರಣ ನೀಡಬೇಕು. ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ ಸುಳ್ಳುಗಳನ್ನು ಮನೆ ಮನೆಗೆ ಮುಟ್ಟಿಸುತ್ತೇವೆ.
ಕಾರ್ಯಕರ್ತರನ್ನು ಸಂಘಟಿಸುತ್ತೇವೆ. ಈ ನಿಟ್ಟಿನಲ್ಲಿ ನನಗೆ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next