Advertisement

ರಾಹುಲ್‌ ಗಾಂಧಿ ರಾಜ್ಯದ 224 ಕ್ಷೇತ್ರಗಳಿಗೂ ಬರಲಿ: ನಳಿನ್‌

08:12 PM Mar 20, 2023 | Team Udayavani |

ದಾವಣಗೆರೆ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕರ್ನಾಟಕದ 224 ಕ್ಷೇತ್ರಗಳಿಗೂ ಬರಲಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವ್ಯಂಗ್ಯವಾಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ರಾಜ್ಯಕ್ಕೆ ಬರುವುದರಿಂದ ನಮಗೆ ಲಾಭವಿದೆ. ಅವರು ಬಂದ ಕಡೆ ಕಾಂಗ್ರೆಸ್‌ ಸೋತಿದೆ. ಹಾಗಾಗಿ 224 ಕ್ಷೇತ್ರಗಳಿಗೂ ಬರುವಂತೆ ಆಹ್ವಾನ ನೀಡುತ್ತೇನೆ ಎಂದರು.
ಪ್ರಧಾನಿ ಮೋದಿ ಮಾ.25ರಂದು ದಾವಣಗೆರೆಯಲ್ಲಿ ನಡೆಯುವ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಆ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳ ಪ್ರಮುಖರ ಸಭೆ ನಡೆಸಲಾಗಿದೆ. ಮೋದಿ ದಾವಣಗೆರೆಗೆ ಆಗಮಿಸಿದಾಗ ಪ್ರತ್ಯೇಕವಾದ ರೋಡ್‌ ಶೋ ಇಲ್ಲ. ಜನರ ನಡುವೆಯೇ ವೇದಿಕೆಗೆ ಆಗಮಿಸಲಿದ್ದಾರೆ. ಉರಿಗೌಡ, ನಂಜೇಗೌಡರ ಜತೆಗೆ ಇತಿಹಾಸ ಪುರುಷರ ಬಗ್ಗೆಯೂ ಚರ್ಚೆ ನಡೆಯಲಿ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next