Advertisement

ರಾಹುಲ್‌ಗೆ ದಲಿತ ಯುವತಿ ಜತೆ ಮದುವೆ ಮಾಡಿಸಲಿ

10:01 AM Aug 30, 2017 | Team Udayavani |

ಬೆಂಗಳೂರು: “ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ದಲಿತರ ಮನೆಗಳಲ್ಲಿ ಉಪಾಹಾರ ಸೇವಿಸುವ ಬದಲು ದಲಿತರ ಕುಟುಂಬದೊಂದಿಗೆ ಸಂಬಂಧ ಬೆಳೆಸಲಿ’ ಎಂದು ಹೇಳಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿ ಕಾರಿರುವ ಬಿಜೆಪಿ ಶಾಸಕ ಗೋವಿಂದ ಕಾರಜೋಳ, “ಕಾಂಗ್ರೆಸ್‌ನವರು ರಾಹುಲ್‌ ಗಾಂಧಿಗೆ ದಲಿತ ಹೆಣ್ಣು ಮಗಳನ್ನು ಮದುವೆ ಮಾಡಲಿ’ ಎಂದು ಪ್ರತಿ ಸವಾಲು ಹಾಕಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮಕ್ಕಳಿಗೆ ಈಗಾಗಲೇ ಮದುವೆಯಾಗಿದೆ. ಹೀಗಾಗಿ ಅವರು ದಲಿತ ಹೆಣ್ಣುಮಗಳನ್ನು ತಮ್ಮ ಮನೆಗೆ ತಂದುಕೊಳ್ಳಲು ಸಾಧ್ಯವಿಲ್ಲ. ಆದರೆ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ಇನ್ನೂ ಮದುವೆಯಾಗಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ ರಾಹುಲ್‌ ಗಾಂಧಿಗೆ ದಲಿತ ಹೆಣ್ಣುಮಗಳನ್ನು ಮದುವೆ ಮಾಡಿಸಲಿ ಎಂದರು.

ರಾಹುಲ್‌ ಗಾಂಧಿ ಒಪ್ಪಿದರೆ ತಮ್ಮ ಕುಟುಂಬದ ಹೆಣ್ಣುಮಗಳನ್ನು ಕೊಡಲು ಸಿದ್ಧವೆಂದು ತಿಳಿಸಿದ ಕಾರಜೋಳ, ಇದಕ್ಕೆ ಕೆಪಿಸಿಸಿ ಅಧ್ಯಕ್ಷರೇ ಬೇಕಿದ್ದರೆ
ಮಧ್ಯಸ್ಥಿಕೆ ವಹಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next