Advertisement

ರಾಹುಲ್ ಮುಂದುವರಿಯಲಿ: ಪರಂ

03:08 AM Jul 05, 2019 | Sriram |
ಬೆಂಗಳೂರು: ‘ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರು ವುದು ನಮಗೆಲ್ಲ ಆಘಾತ ತಂದಿದೆ. ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕು’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ‘ಪಕ್ಷದ ಕಾರ್ಯಕಾರಿಣಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆಯೋ ನೋಡಬೇಕು. ಮುಂದಿನ ವಾರ ದೆಹಲಿಗೆ ತೆರಳಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜೀನಾಮೆ ವಾಪಸ್‌ ಪಡೆಯುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದರು. ಇನ್ನು ರಾಜೀನಾಮೆ ನೀಡಿರುವ ಶಾಸಕ ಆನಂದ್‌ಸಿಂಗ್‌ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಿಲ್ಲ. ಒಂದು ಹಂತದವರೆಗೆ ಮನವೊಲಿಕೆ ಮಾಡಬಹುದು. ಆ ಹಂತ ದಾಟಿದ ಮೇಲೆ ಅವರ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದರು. ಅತೃಪ್ತ ಶಾಸಕರ ಸಮಸ್ಯೆಗಳನ್ನು ಆಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಿಂದ ವಾಪಸ್‌ ಆದ ಮೇಲೆ ಇಬ್ಬರೂ ಸೇರಿ ಒಬ್ಬೊಬ್ಬರೇ ಶಾಸಕರನ್ನು ಕರೆದು ಅವರ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಮಾತುಕತೆ ನಡೆಸುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next