Advertisement

Siddaramaiah ಆರೋಪ ಮುಕ್ತರಾಗುವವರೆಗೆ ಸ್ಥಾನ ತ್ಯಜಿಸಲಿ: ನಾರಾಯಣಸ್ವಾಮಿ

12:46 AM Aug 19, 2024 | Team Udayavani |

ಚಿತ್ರದುರ್ಗ : ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಏಕೆ ಕೊಟ್ಟರೆಂದು ಕೇಳುವ ಅಧಿಕಾರ ಯಾರಿಗೂ ಇಲ್ಲ. ಕಾನೂನು ಮೂಲಕ ಸಿದ್ದರಾಮಯ್ಯ ಹೋರಾಟ ಮಾಡಲಿ. ಅಲ್ಲಿಯವರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರೋಪ ಸುಳ್ಳು ಎಂದು ಸಾಬೀತಾದಾಗ ಮತ್ತೂಮ್ಮೆ ಮುಖ್ಯಮಂತ್ರಿಯಾಗಲಿ ಎಂದು ವಿಧಾನಪರಿಷತ್‌ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

Advertisement

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ವಿಚಾರಕ್ಕೆ ಸಂಬಧಿಸಿದಂತೆ ಕಾಂಗ್ರೆಸ್‌ ಪಕ್ಷ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಬಿಎಸ್‌ವೈ ವಿಚಾರದಲ್ಲಿ ಅಂದು ಕಾಂಗ್ರೆಸ್‌ ಸ್ವಾಗತಿಸಿತ್ತು, ಈಗ ರಾಜ್ಯಪಾಲರ ನಿರ್ಧಾರ ವಿರೋಧಿಸುವ ಬದಲು ಸ್ವಾಗತಿಸಬೇಕಿತ್ತು. ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದ ಆರೋಪ ಒಪ್ಪಿಕೊಂಡಿದ್ದರೆ ಭ್ರಷ್ಟಾಚಾರದ ವಿರೋಧಿಗಳೆನ್ನಬಹುದಿತ್ತು. ಆದರೆ ಈ ರೀತಿ ಪ್ರತಿಭಟಿಸಿದರೆ ಭ್ರಷ್ಟಾಚಾರಕ್ಕೆ ಅವಕಾಶ ಕೊಡಿ ಎಂದಾಗುತ್ತದೆ ಎಂದು ಕುಟುಕಿದರು.

ಲ್ಯಾಂಬೋರ್ಗಿನಿ ಖರೀದಿ
ಎಸ್‌ಟಿ ಸಮುದಾಯದ 187 ಕೋಟಿ ರೂ. ಕಬಳಿಕೆ ಮಾಡಿ ಚುನಾವಣೆಗೆ, ಲ್ಯಾಂಬೋರ್ಗಿನಿ ಕಾರು ಖರೀದಿಗೆ ಬಳಕೆ ಮಾಡಿದ್ದಾರೆ. ಚಿನ್ನ ಮತ್ತು ಜಮೀನು ಖರೀದಿಗೆ ಎಸ್‌ಟಿ ನಿಗಮದ ಹಣ ವರ್ಗಾವಣೆ ಆಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next