Advertisement

BJP: ಮಂಡ್ಯದಿಂದ ಸುಮಲತಾ ಸ್ಪರ್ಧಿಸಲಿ: ನಾರಾಯಣ ಗೌಡ

08:41 PM Feb 04, 2024 | Team Udayavani |

ಪಾಂಡವಪುರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಅನ್ನು ಸಂಸದೆ ಸುಮಲತಾರಿಗೆ ನೀಡಬೇಕು. ಜೆಡಿಎಸ್‌ಗೆ ಬೇರೆ ಕ್ಷೇತ್ರವನ್ನು ನೀಡಲಿ ಎಂದು ಮಾಜಿ ಸಚಿವ ನಾರಾಯಣ ಗೌಡ ಹೇಳಿದ್ದಾರೆ.

Advertisement

ತಾಲೂಕಿನ ಕೆನ್ನಾಳು ಗೇಟ್‌ ಬಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಮಲತಾ ಈ ಹಿಂದೆ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಸಹಾಯ ಮಾಡಿದ್ದಾರೆ. ಮಂಡ್ಯ ಲೋಕಸಭೆ ಕೇತ್ರವನ್ನು ಅವರಿಗೆ ನೀಡಬೇಕು ಎನ್ನುವುದು ನಮ್ಮ ಅಭಿಪ್ರಾಯ. ಈ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿ ಗಮನಕ್ಕೆ ತಂದಿದ್ದೇವೆ. ಜತೆಗೆ ಸುಮಲತಾ ಕೂಡ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next