Advertisement

ಸುಮಲತಾ ಗೆಲುವು ಆದರ್ಶವಾಗಲಿ: ಸಿದ್ದು

11:39 PM Sep 21, 2019 | Team Udayavani |

ಹೊಸಕೋಟೆ: ಅನರ್ಹಗೊಂಡ ಶಾಸಕರ 15 ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸಂಪೂರ್ಣ ಜಯಗಳಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ ಸ್ವಾಭಿಮಾನ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Advertisement

ಹಣ ಖರ್ಚು ಮಾಡಿದರೆ ಮತ ಪಡೆಯಬಹುದೆಂಬ ಭ್ರಮೆಯಲ್ಲಿರುವವರಿಗೆ ಮತದಾರರು ಮತ ಮಾರಾಟಕ್ಕಿಟ್ಟಿಲ್ಲ ಎಂಬುದನ್ನು ನಿರೂಪಿಸಬೇಕು. ಎಂಟಿಬಿ ನಾಗರಾಜ್‌ ಕಾಂಗ್ರೆಸ್‌ ತೊರೆದರೂ ಸಹ ತಾಲೂಕಿನಲ್ಲಿ ಇನ್ನೂ ಶೇ.80ರಷ್ಟು ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದಲ್ಲಿಯೇ ಉಳಿದಿ ದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಸ್ವಾಭಿಮಾನದ ಹೆಸರಿನಲ್ಲಿ ಜಯ ಗಳಿಸಿರುವುದು ಕಾರ್ಯಕರ್ತರಿಗೆ ಆದರ್ಶವಾಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next