Advertisement

ಶ್ರೀನಗರ: ವಲಸೆ ಕಾರ್ಮಿಕರನ್ನು ಹತ್ಯೆಗೈದಿದ್ದ ಬಂಧಿತ ಲಷ್ಕರ್ ಉಗ್ರ ಗುಂಡಿನ ದಾಳಿಗೆ ಸಾವು

10:33 AM Oct 19, 2022 | Team Udayavani |

ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ನಡೆಸಿ ಉತ್ತರ ಪ್ರದೇಶ ಮೂಲದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆಗೈದಿದ್ದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರನೊಬ್ಬ ಬಂಧಿಸಲ್ಪಟ್ಟಿದ್ದು, ಈ ಸಂದರ್ಭದಲ್ಲಿ ಮತ್ತೊಬ್ಬ ಉಗ್ರ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ (ಅಕ್ಟೋಬರ್ 19) ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಕುಷ್ಟಗಿ : ಧಾರಾಕಾರ ಮಳೆಗೆ ಜನವಸತಿ ಪ್ರದೇಶ ಜಲಾವೃತ, ಜನ ಜೀವನ ಅಸ್ತವ್ಯಸ್ತ

ಪೊಲೀಸರ ಮಾಹಿತಿ ಪ್ರಕಾರ, ಹರ್ಮೈನ್ ಶೋಪಿಯಾನ್ ನಿವಾಸಿ ಇಮ್ರಾನ್ ಗನೈ ಎಂಬಾತ ಮತ್ತೊಬ್ಬ ಉಗ್ರನ ಗುಂಡಿನ ದಾಳಿಗೆ ಬಲಿಯಾಗಿರುವುದಾಗಿ ತಿಳಿಸಿದೆ. ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆ ಮುಂದುವರಿದಿದೆ.

ಈ ನಿಟ್ಟಿನಲ್ಲಿ ಉಗ್ರರನ್ನು ಹತ್ತಿಕ್ಕುವ ಕಾರ್ಯ ನಿರಂತರವಾಗಿ ಮುಂದುವರಿದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಉಗ್ರನ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next