Advertisement

ಬಿಜೆಪಿಯವರು ಒಣ ಜಂಭ ಬಿಡಲಿ: ಸಿದ್ದು

06:25 AM Oct 22, 2018 | Team Udayavani |

ಮೈಸೂರು: ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದ ಅವರು, “ಅವಳ ಹಲ್ಲೇನು ಬಿಗಿಯಾಗಿದೆಯಾ? ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಅವಳು ಸೋತಿಲ್ಲವೇ? ನನ್ನ ಬಗ್ಗೆ ಮಾತನಾಡುವ ನೈತಿಕತೆ ಅವಳಿಗೆ ಇದೆಯಾ?’ ಎಂದು ಏಕವಚನದಲ್ಲೇ ನಿಂದಿಸಿದರು. ಓಟುಗಳೇನು ಯಡಿಯೂರಪ್ಪನ ಜೇಬಿನಲ್ಲಿಲ್ಲ. ಬಿಜೆಪಿಯವರು ಒಣ ಜಂಭ ಬಿಡಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಜಯ ನಮ್ಮದೇ. ನಮ್ಮ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ಈಗಾಗಲೇ ಹಲವು ಡೆಡ್‌ಲೈನ್‌ಗಳು ಮುಗಿದಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next