Advertisement
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಗರ್ಹುಕುಂ ಸಮಿತಿ ಅಧ್ಯಕ್ಷ ಬಿ.ಆರ್ .ಜಯಂತ್, ಬರಗಾಲದ ಹಿನ್ನೆಲೆಯಲ್ಲಿ ರೈತರುಸಹಕಾರಿ ಸಂಸ್ಥೆಗಳಲ್ಲಿ ಮಾಡಿಕೊಂಡಿದ್ದ 50 ಸಾವಿರ ರೂ. ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದೆ. ರಾಜ್ಯದಲ್ಲಿ ಮನ್ನಾದ ಕೂಗು ಎಬ್ಬಿಸಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ಕೇಂದ್ರದ ಮೇಲೆ ಒತ್ತಡ ಹೇರದೆ, ಅಲ್ಲಿಂದ ಸಾಲ ಮನ್ನಾ ಇಲ್ಲ ಎನ್ನುವುದು ಎಂತಹ ರೈತಪರ ನಿಲುವು ಎಂದು ಪ್ರಶ್ನಿಸಿದರು.
ಮಾಡುತ್ತಿದ್ದಾರೆ. ಜನವಿರೋಧಿ, ದೇಶ ವಿರೋಧಿ, ಸಮಾಜ ವಿರೋಧಿ ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿಗೆ ರೈತಪರವಾದ ಯಾವುದೆ ಕಾಳಜಿ ಇಲ್ಲವಾಗಿದೆ. ತಕ್ಷಣ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರಾಜ್ಯದ ರೈತರು ಮಾಡಿರುವ ಸಾಲಮನ್ನಾ ಮಾಡದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ರೈತರ ಪರವಾಗಿ ಬಿಜೆಪಿ ದ್ವಿಮುಖ ನೀತಿ ಜನರಿಗೆ ಈಗಲಾದರೂ ಅರ್ಥವಾಗಬೇಕು.
ಡಾ| ಸ್ವಾಮಿನಾಥನ್ ವರದಿ ಜಾರಿ ಬಂದರೆ ಮಾತ್ರ ರೈತರ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ ಎಂದಿದ್ದರೆ ಕೇಂದ್ರ ವರದಿ ಜಾರಿ ಅಸಾಧ್ಯ ಎಂದು ಘೋಷಿಸಿ ತನ್ನ ನಿಜಬಣ್ಣ ಬಯಲು ಮಾಡಿದೆ. ದೇಶ ಪ್ರೇಮದ ಹೇಳಿಕೆಗಳನ್ನು ಪಠಿಸುವ ಬಿಜೆಪಿ, ಆರೆಸ್ಸೆಸ್ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಒಬ್ಬರೂ ಬಲಿದಾನ ಮಾಡಿಲ್ಲ ಎಂದು ಟೀಕಿಸಿದರು. ಜಿಪಂ ಸದಸ್ಯ ಕಾಗೋಡು ಅಣ್ಣಪ್ಪ ಮಾತನಾಡಿ, ರಾಜ್ಯದ ಬಿಜೆಪಿ ಮುಖಂಡರಿಗೆ ನರೇಂದ್ರ ಮೋದಿಯವರ ಎದುರು ಮಾತನಾಡುವ ಶಕ್ತಿಯೆ ಇಲ್ಲವಾಗಿದೆ. ರಾಜ್ಯವು ಮೂರು ವರ್ಷದಿಂದ ಭೀಕರ ಬರಗಾಲ ಎದುರಿಸುತ್ತಿದ್ದು, ರೈತರು ಆತಂಕದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ರೈತಪರ ನಿಲುವನ್ನು ವ್ಯಕ್ತಪಡಿಸಿದೆ. ಹಾಗೆಯೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್
ಗಳಲ್ಲಿರುವ ರಾಜ್ಯದ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
Related Articles
Advertisement