Advertisement

Cauvery Issue: ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಲಿ: ನಟ ಶಿವರಾಜ್‌ಕುಮಾರ್‌

10:48 PM Oct 22, 2023 | Team Udayavani |

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಎರಡು ರಾಜ್ಯಗಳ ನಾಯಕರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಬಹುದು ಎಂದು ನಟ ಶಿವರಾಜ್‌ಕುಮಾರ್‌ ಹೇಳಿದರು.

Advertisement

ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ನಾವು ಒತ್ತಡ ತರಬೇಕು. ಯಾವ ರೀತಿ ತರಬೇಕು ಎನ್ನುವುದನ್ನು ಎಲ್ಲರೂ ತೀರ್ಮಾನ ಮಾಡಬೇಕು ಎಂದರು.

ಕರ್ನಾಟಕ ಹಾಗೂ ತಮಿಳುನಾಡು ಎರಡು ಸರ್ಕಾರಗಳ ನಾಯಕರು ಕುಳಿತು ಮಾತನಾಡಬೇಕು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯೆ ಪ್ರವೇಶ ಮಾಡಿ ಮಾತುಕತೆ ನಡೆಸಬೇಕು. ಆಗ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಖಂಡಿತವಾಗಿಯೂ ನಾವು ರೈತರ ಜೊತೆ ಇರುತ್ತೇವೆ. ನಮ್ಮ ಹೋರಾಟ ದೊಡ್ಡದಾಗಿರಬೇಕು. ಬರೀ ಪ್ರತಿಮೆಗಳಿಗೆ ಬೆಂಕಿ ಹಚ್ಚುವುದಲ್ಲ. ನಮಗೆ ಕಿಚ್ಚು ಇರುತ್ತೆ. ಆದರೆ ತಾಳ್ಮೆಯಿಂದ ಹೋರಾಟ ಮಾಡಬೇಕು. ನಾನು ಒಬ್ಬ ಕಲಾವಿದ. ದೊಡ್ಡವರು ಸಹ ಕುಳಿತು ರೈತರ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next