Advertisement

Governor ಅವಹೇಳನಕ್ಕೆ ಸಿಎಂ,ಡಿಸಿಎಂ ಕ್ಷಮೆ ಕೇಳಲಿ: ಈಶ್ವರಪ್ಪ

10:36 PM Sep 02, 2024 | Team Udayavani |

ಶಿವಮೊಗ್ಗ : ಕಾಂಗ್ರೆಸ್‌ನವರು ಸಂವಿಧಾನಾತ್ಮಕ ಹುದ್ದೆ (ರಾಜ್ಯಪಾಲ)ಯನ್ನು ಬೀದಿಗೆ ತಂದು ರಾಜ್ಯದಲ್ಲಿ ಅರ್ಥಹೀನ ರಾಜಕಾರಣ ಮಾಡುತ್ತಿದ್ದಾರೆ. ಜನತೆ ಅಸಹ್ಯಪಡುವ ರೀತಿಯಲ್ಲಿ ದೊಡ್ಡ ದೊಡ್ಡ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕೂಡಲೇ ರಾಜ್ಯಪಾಲರು ಹಾಗೂ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ವಿಷಯ ಇಟ್ಟುಕೊಂಡು ರಾಜಭವನ ಚಲೋ, ರಾಜ್ಯಪಾಲರ ಭಾವಚಿತ್ರ ಸುಟ್ಟು ಹಾಕುವುದು, ಅವಹೇಳನಕಾರಿಯಾಗಿ ಮಾತನಾಡುವುದು ಸಂವಿಧಾನ ವಿರೋಧಿ ಯಲ್ಲವೇ ಎಂದು ಪ್ರಶ್ನಿಸಿದ ಅವರು, ಇದು ಕಾಂಗ್ರೆಸ್‌ನ ಅಸಹ್ಯಕರ ಮತ್ತು ಅರ್ಥಹೀನ ರಾಜಕಾರಣವಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next