Advertisement

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

01:04 AM Oct 01, 2024 | Team Udayavani |

ಮಂಗಳೂರು: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದು ಒಳಿತು. ಆ ಮೂಲಕ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು. ಹಗರಣದ ಆರೋಪ ಹೊತ್ತು ಮುಂದುವರಿಯುವುದು ಘನತೆಗೆ ತಕ್ಕುದಾದುದಲ್ಲ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

Advertisement

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತು ಮಾತಿಗೆ ಸಂವಿಧಾನದಂತೆ ನಡೆದುಕೊಳ್ಳುವೆ ಕಾನೂನಿಗೆ ತಲೆ ಬಾಗುವೆ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ಈಗ ಎಲ್ಲವನ್ನೂ ಮರೆತಿದ್ದಾರೆ. ಅವರ ಸಮಾಜವಾದ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು.

 

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next