Advertisement

ಡೇರಿ ಆಡಳಿತ ಪಾರದರ್ಶಕವಾಗಿರಲಿ

12:25 PM Sep 25, 2020 | Suhan S |

ದೊಡ್ಡಬಳ್ಳಾಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಅಧ್ಯಕ್ಷರು, ಆಡಳಿತ ಮಂಡಳಿ ಪಾತ್ರ ಮುಖ್ಯವಾಗಿದ್ದು ಪಾರದರ್ಶಕ ಆಡಳಿತವಿದ್ದರೆ ಸಂಘ ಪ್ರಗತಿ ಹೊಂದುತ್ತದೆ ಎಂದು ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್‌ ಹೇಳಿದರು.

Advertisement

ನಗರದ ಹಾಲು ಶೀಥಲ ಕೇಂದ್ರದ ಸಭಾಂಗಣದಲ್ಲಿ ಬುಧವಾರ ನಡೆದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಕಾಲಕ್ಕೆ ಲೆಕ್ಕಪತ್ರ ಮಂಡಿಸಿ: ಸಂಘದ ಸದಸ್ಯರಿಗೆ ವಿಶ್ವಾಸ ಮೂಡಲು ಆಡಳಿತದಲ್ಲಿ ಪಾರದರ್ಶಕತೆ ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಅಧ್ಯಕ್ಷರು ಸಕಾಲಕ್ಕೆ ಸರ್ವ ಸದಸ್ಯರ ಸಭೆ ನಡೆಸಿ ಲೆಕ್ಕಪತ್ರಗಳನ್ನು ಮಂಡಿಸಬೇಕು. ಇದರಿಂದ ಸಂಘ ಲಾಭದಾಯಕವಾಗಿ ನಡೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಹಾಲಿನ ಗುಣಮಟ್ಟ ಕಾಪಾಡಿ: ಹಾಲು ಒಕ್ಕೂಟದಿಂದ ರೈತರಿಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತಿದ್ದು ಈ ಬಗ್ಗೆ ಸಂಘದ ಅಧ್ಯಕ್ಷರು ಮೊದಲು ಸರಿಯಾದ ಮಾಹಿತಿ ಪಡೆದು ಸದಸ್ಯರಿಗೆ ತಿಳಿಸಬೇಕು. ಹಾಲಿನ ಗುಣಮಟ್ಟದ ಕಡೆಗೆ ಗಮನಹರಿಸಬೇಕೆಂದು ಸಲಹೆ ನೀಡಿದರು.

ಹಾಲು ಉತ್ಪಾದನೆ ಹೆಚ್ಚಳ: ಲಾಕ್‌ಡೌನ್‌ ನಂತರ ಹೈನುಗಾರಿಕೆ ಉದ್ಯಮದತ್ತ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹೋಟೆಲ್, ಶುಭ ಸಮಾರಂಭ ಪೂರ್ಣ ಪ್ರಮಾಣದಲ್ಲಿ ಆರಂಭವಾಗದೇ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಕುಸಿತವಾಗಿದ್ದು ಹಾಲಿನ ಉತ್ಪಾದನೆ ಮಾತ್ರ ಹೆಚ್ಚಾಗಿದೆ ಎಂದು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಡಾ.ಗೋಪಾಲಕೃಷ್ಣ, ಅಪ್ಪಕಾರನಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ರಾಮಣ್ಣ, ವಿಸ್ತರಣಾಧಿಕಾರಿ ಎಂ.ಅಶ್ವತ್ಥಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕೋವಿಡ್ ಹಿನ್ನೆಲೆ ಹಾಲಿನ ಖರೀದಿ ಬೆಲೆಯಲ್ಲಿಕಡಿಮೆ ಮಾಡಲಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಮತ್ತೆ ಹಾಲಿನ ಬೆಲೆ ಏರಿಕೆ ಆಗಲಿದೆ. ಬಿ.ಸಿ.ಆನಂದ್‌ಕುಮಾರ್‌, ಕೆಎಂಎಫ್‌ ನಿರ್ದೇಶಕರು

Advertisement

Udayavani is now on Telegram. Click here to join our channel and stay updated with the latest news.

Next