Advertisement

ಗ್ರಾಮೀಣರಿಗೆ ಸರ್ಕಾರಿ ಸೌಲಭ್ಯಗಳು ತಲುಪಲಿ

08:51 PM Feb 16, 2020 | Team Udayavani |

ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಅನಿಲ್‌ ಚಿಕ್ಕಮಾದು ತಾಲೂಕಿನ ಎನ್‌.ಬೆಳತ್ತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ 2 ದಿನದ ಗ್ರಾಮವಾಸ್ತವ್ಯ ಮತ್ತು ಆದಿವಾಸಿಗರ ಬುಡಕಟ್ಟು ಉತ್ಸವ ಭಾನುವಾರ ತೆರೆಕಂಡಿತು.

Advertisement

ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ತಾಲೂಕಿನಲ್ಲಿ 4 ಜಲಾಶಯಗಳಿದ್ದು, ಅಪಾರ ವನಸಂಪತ್ತಿರುವ ತಾಲೂಕನ್ನು ಹಿಂದುಳಿದ ಪಟ್ಟಿ ಹೆಸರು ತೆಗೆಯಬೇಕು. ತಾಲೂಕಿನಲ್ಲಿ ಕಾಡಿಂಚಿನ ಗ್ರಾಮಗಳು ಮತ್ತು ಆದಿವಾಸಿಗರೇ ಬಹುಸಂಖ್ಯೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶಗಳ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು ಎಂಬ ಉದ್ದೇಶದಿಂದ ತಾಲೂಕಿನಲ್ಲಿ 3ನೇ ಗ್ರಾಮವಾಸ್ತವ್ಯ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

ಸ್ಥಳದಲ್ಲೇ ಅಧಿಕಾರಿಗಳಿಂದ ಸಮಸ್ಯೆಗೆ ಪರಿಹಾರ: ಕಳೆದ 2 ದಿನಗಳ ಹಿಂದಿನಿಂದ ತಾಲೂಕಿನ ಎನ್‌.ಬೆಳತ್ತೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿರುವುದರ ಎನ್‌.ಬೆಳತ್ತೂರು ಗ್ರಾಪಂ ಆವರಣದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಸ್ಥಳದಲ್ಲಿಯೇ ಅರ್ಹ ಪಲಾನುಭವಿಗಳನ್ನು ತಲುಪಬೇಕು ಎಂಬ ಉದ್ದೇಶದಿಂದ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಆಲಿಸಿ, ಅದಕ್ಕೆ ಸ್ಥಳದಲ್ಲಿಯೇ ಹಲವು ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಂದ ಪರಿಹರಿಸಲಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ: ಗ್ರಾಮ ವಾಸ್ತವ್ಯದಲ್ಲಿ ರಸ್ತೆ, ಮನೆಗಳ ನಿರ್ಮಾಣ, ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ 4.75 ಕೋಟಿ ಅನುದಾನ ಬಿಡುಗಡೆಗೊಳಿಸಿ ಭೂಮಿ ಪೂಜೆ ನೆರವೇರಿಸಲಾಗಿದೆ. ಆಧಾರ್‌ ಕಾರ್ಡ್‌ ಮನೆ ಹಕ್ಕುಪತ್ರಗಳು, ಅಂಗನವಾಡಿ ನೂತನ ಕಟ್ಟಡ ಉದ್ಘಾಟನೆ ಸೇರಿದಂತೆ ವಿಧವಾ ವೇತನ, ವೃದ್ಧಾಪ್ಯ ವೇತನ, ಮನಸ್ವಿನಿ, ಆರೋಗ್ಯ ಕಾರ್ಡ್‌ ವಿತರಣೆ,

ಸ್ಮಶಾನ ಜಾಗ ಒತ್ತುವರಿ ತೆರವು ಸೇರಿದಂತೆ ಇನ್ನಿತರ ಸೇವಾ ಯೋಜನೆಗಳನ್ನು ಎನ್‌.ಬೆಳತ್ತೂರು ಗ್ರಾಮದಲ್ಲಿ ಸ್ಥಳದಲ್ಲಿಯೇ ನೊಂದಾಯಿಸುವುದು ವಾಸ್ತವ್ಯದ ಮುಖ್ಯಉದ್ದೇಶವಾಗಿದೆ. ತಾಲೂಕಿನ ಜನಸಾಮಾನ್ಯರು, ಪಕ್ಷದ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ ಚುನಾಯಿತ ಪ್ರತಿನಿಧಿಗಳು, ತಾಲೂಕಿನ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಿರುವುದಕ್ಕೆ ಶಾಸಕ ಅನಿಲ್‌ ಚಿಕ್ಕಮಾದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಜಿಪಂ ಅಧ್ಯಕ್ಷೆ ಪರಿಮಳ ಶ್ಯಾಂ ಮಾತನಾಡಿ, ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗಷ್ಟೇ ಅಲ್ಲದೆ ಬುಡಕಟ್ಟು ಉತ್ಸವ ಆಚರಣೆಗೆ ಶಾಸಕ ಅನಿಲ್‌ ಚಿಕ್ಕಮಾದು ಪರಿಶ್ರಮ ಕಾರಣವಾಗಿದೆ. ಈ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶಾಸಕರೊಡಗೂಡಿ ಸಹಕಾರ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಪಂ ಅಧ್ಯಕ್ಷ ರಾಜು, ಉಪಾಧ್ಯಕ್ಷೆ ದೊಡ್ಡಮಣಿ, ಜಿಪಂ ಸದಸ್ಯ ವೆಂಕಟಸ್ವಾಮಿ, ತಾಪ ಸದಸ್ಯೆ ಸರೋಜಿನಿ ಬಲರಾಮ, ಪುರಸಭೆ ಸದಸ್ಯ ಎಚ್‌.ಸಿ.ನರಸಿಂಹಮೂರ್ತಿ, ಮಧು, ರಾಜು, ಆದಿವಾಸಿ ಮುಖಂಡ ಕಾವೇರ, ಎಂ.ಡಿ.ಮಂಚಯ್ಯ, ಪ್ರದೀಪ್‌, ಬಸಪ್ಪ, ನಾಗರಾಜು, ತಹಶೀಲ್ದಾರ್‌ ಆರ್‌.ಮಂಜುನಾಥ್‌, ಇಒ ರಾಮಲಿಂಗಯ್ಯ, ಗಿರಿಜನ ಅಭಿವೃದ್ಧಿ ಅಧಿಕಾರಿ ಚಂದ್ರಪ್ಪ, ಬಿಇಒ ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಚನ್ನಪ್ಪ ಮೊದಲಾದವರಿದ್ದರು.

ಬುಡಕಟ್ಟು ಉತ್ಸವ ಅದ್ಧೂರಿ: ತಾಲೂಕಿನ ಆದಿವಾಸಿಗರ ಬುಡಕಟ್ಟು ಉತ್ಸವ ಮತ್ತು ಗ್ರಾಮವಾಸ್ತವ್ಯ ಎರಡು ಕಾರ್ಯಕ್ರಮಗಳು ಒಂದೇ ವೇದಿಕೆಯಲ್ಲಿ ನಡೆದವು. ಆದಿವಾಸಿಗರು ಆರಂಭದಲ್ಲಿ ಕಾರಾಪುರ ವೃತ್ತದಿಂದ ಕಂಸಾಳೆ, ಕೋಲಾಟ, ನೃತ್ಯ, ಕರಡಿ ಕುಣಿತ, ಡೊಳ್ಳುಕುಣಿತ, ಎರವ ಕುಣಿತ ಸೇರಿದಂತೆ ಇನ್ನಿತರ ಆದಿವಾಸಿ ಪರಂಪರೆಯನ್ನು ಪ್ರತಿಬಿಂಬಿಸುವ ವಿವಿಧ ನೃತ್ಯ ಮತ್ತು ಕಲಾತಂಡಗಳ ಮೆರವಣಿಗೆಗೆ ಶಾಸಕ ಅನಿಲ್‌ ಡೊಳ್ಳು ಬಾರಿಸಿ ಚಾಲನೆ ನೀಡಿದರು.

ಆದಿವಾಸಿಗರ ಕಾರ್ಯಕ್ರಮ ಕುರಿತು ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ಬುಡಕಟ್ಟು ಉತ್ಸವ ಪ್ರತಿ ಸಾಲಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿತ್ತು. ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ತಾಲೂಕಿನ ಎನ್‌.ಬೆಳತ್ತೂರು ಗ್ರಾಮದಲ್ಲಿ ಆಚರಿಸಿ, ಆದಿವಾಸಿಗರ ಸಾಂಪ್ರದಾಯಿಕ ಕಲೆ ಸಂಸ್ಕೃತಿ ಗ್ರಾಮೀಣ ಪ್ರದೇಶಗಳ ಜನತೆ ತಿಳಿಸುವುದರ ಜೊತೆಯಲ್ಲಿ ಕಲೆ ಸಂಸ್ಕೃತಿ ಉಳಿಸುವ ಉದ್ದೇಶವಿದಾಗಿದೆ ಎಂದು, ಆದಿವಾಸಿಗರ ಬುಡಕಟ್ಟು ಉತ್ಸವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next