Advertisement

ಬೆಳೆ ಖರೀದಿ ಸಂಸ್ಥೆಗಳ ಮೇಲೆ ಸರ್ಕಾರ ಹಿಡಿತ ಸಾಧಿಸಲಿ

05:06 PM Oct 09, 2020 | Suhan S |

ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಎ.ಪಿ.ಎಂ.ಸಿ ಮತ್ತುಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ಕುರಿತು ವಿಚಾರ ಸಂಕೀರಣ ಕರ್ನಾಟಕ ನವ ನಿರ್ಮಾನ ಸೇನೆಯ ಮೂಡಲಗಿ ತಾಲೂಕಾ ಘಟಕ ಆಶ್ರಯದಲ್ಲಿ ನಾಗನೂರ ಅರ್ಬನ್‌ ಸೊಸೈಟಿ ಸಭಾ ಭವನದಲ್ಲಿ ಜರುಗಿತು.

Advertisement

ರೈತ ಮುಖಂಡ ಚುನ್ನಪ್ಪ ಪೂಜೇರಿ ಮಾತನಾಡಿ, ರಾಜ್ಯದಲ್ಲಿ ಜಾರಿ ಆಗಲಿರುವ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯು ಮಧ್ಯವರ್ತಿಗಳಿಂದ ಮುಕ್ತಗೊಳಿಸುವ ನೆಪದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಈಗಾಗಲೇ ಕಬ್ಬನ್ನು ಖಾಸಗಿ ಕಂಪನಿಗಳಿಗೆ ನೀಡಿ ರೈತರು ಅನುಭವಿಸುತ್ತಿರುವ ಗೋಳು ಕೇಳುವವರಿಲ್ಲ. ತಿದ್ದುಪಡಿ ಅನಿವಾರ್ಯವೇ ಆಗಿದ್ದರೆ ಬೆಳೆಯನ್ನು ಖರೀದಿಸುವ ಕಾರ್ಪೊರೇಟ್‌ ಕಂಪನಿಗಳ ಮೇಲೆ ಸರ್ಕಾರ ಪೂರ್ಣ ಹಿಡಿತ ಹೊಂದಿರಬೇಕು. ಇನ್ನು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ಕೃಷಿ ಕ್ಷೇತ್ರಕ್ಕೆ ಬಹುದೊಡ್ಡ ಹೊಡೆತವೇ ಸರಿ. ಕೃಷಿ ಹೆಸರಿನಲ್ಲಿ ಭೂಮಿಖರೀದಿಸುವ ಕಾರ್ಪೊರೇಟ್‌  ಕಂಪನಿಗಳು ಕಾಲಕ್ರಮೆಣ ಉದ್ಯಮಕ್ಕೆ ಬಳಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿವೆ ಎಂದರು. ಮಲ್ಲಪ್ಪ ಮದಗುಣಕಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಮುಕ್ತರಾಗಿ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಬೆಳೆಯನ್ನು ಮಾರಾಟ ಮಾಡಲು ಸರಕಾರವು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಕ್ಕಾನಟ್ಟಿ ಬರ್ಡ್ಸ ಸಂಸ್ಥೆಯ ಅಧ್ಯಕ್ಷ ಎ.ಆರ್‌ ಪಾಟೀಲ್‌ ಮಾತನಾಡಿ, ಕರ್ನಾಟಕ ನವನಿರ್ಮಾಣ ಸೇನೆಯ ಪ್ರಯತ್ನ ಶ್ಲಾಘಿಸಿ ಈ ಚರ್ಚೆಯನ್ನು ಸರ್ಕಾರಕ್ಕೆ ಮುಟ್ಟಿಸುವುದಾಗಿ ತಿಳಿಸಿದರು.

ಉಮೇಶ ಬೆಳಕೂಡ, ಬಿಜೆಪಿ ರೈತಮೋರ್ಚಾ ಅರಭಾಂವಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ ಮಾತನಾಡಿದರು.ಈಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ತಾಲೂಕು ಉಪಾಧ್ಯಕ್ಷ ಮಹಾಂತೇಶ ಮುಗಳಖೋಡ, ಪ್ರಧಾನ ಕಾರ್ಯದರ್ಶಿ ಶಾನೂರ ಕುರಬೇಟ, ಬಸವರಾಜ ನಾಯ್ಕ, ಶಿವಾನಂದ ಮೇಣಸಿ, ಸಾಗರ ಢವಳೇಶ್ವರ, ರಾಘವೇಂದ್ರ ಮುನ್ಯಾಳ, ಸುರೇಶ ಪಾಟೀಲ, ರೈತ ಮುಖಂಡ ಶ್ರೀಶೈಲ ಅಂಗಡಿ, ಮಂಜುನಾಥ ಗದಾಡಿ, ಈರಪ್ಪ ಇದ್ದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next