Advertisement

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

11:04 PM Sep 25, 2023 | Team Udayavani |

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ಆತನ ಸಹಪಾಠಿಗಳಿಂದಲೇ ಖುದ್ದು ಶಿಕ್ಷಕಿಯೇ ಆದೇಶ ನೀಡಿ ಹೊಡೆಸಿದ್ದ ಪ್ರಕರಣದಲ್ಲಿ ರಾಜ್ಯದ ಆತ್ಮಸಾಕ್ಷಿ ಎಚ್ಚರಗೊಳ್ಳಬೇಕಿತ್ತು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಪ್ರಕರಣ ಸಂಬಂಧ ಕ್ಷಿಪ್ರ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾ. ಅಭಯ್‌.ಎಸ್‌. ಓಕಾ ಅವರ ನ್ಯಾಯಪೀಠ ವಿಚಾರಣೆ ನಡೆಸಿದೆ. ಈ ವೇಳೆ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ನಿರ್ವಹಿಸುತ್ತಿರುವ ರೀತಿ ಆಕ್ಷೇಪಾರ್ಹ.

Advertisement

ಮಗು ಮುಸ್ಲಿಂ ಎಂಬ ಕಾರಣಕ್ಕೆ ಶಿಕ್ಷಕಿ ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ನಿಜವೇ ಆಗಿದ್ದಲಿ ಅದು ಜೀವಿಸುವ ಹಕ್ಕು, ಶಿಕ್ಷಣದ ಹಕ್ಕುಗಳನ್ನೇ ಕಸಿದಂತೆ. ಈ ವಿಚಾರದಲ್ಲಿ ರಾಜ್ಯ ತನ್ನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕಾಗುತ್ತದೆ ಎಂದಿದೆ. ಜತೆಗೆ ಸಂತ್ರಸ್ತ ವಿದ್ಯಾರ್ಥಿಗೆ ಹಾಗೂ ಆತನ ಸಹಪಾಠಿಗಳಿಗೆ ತಜ್ಞರು ಆಪ್ತ ಸಮಾಲೋಚನೆ ನೀಡಿದ್ದಾರೆಯೇ ಎಂಬ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next