Advertisement

ಹೆದ್ದಾರಿ ಗುಣಮಟ್ಟದಿಂದ ಕೂಡಿರಲಿ: ಕಾರಜೋಳ

10:22 PM Dec 24, 2019 | Lakshmi GovindaRaj |

ಬೆಂಗಳೂರು: ರಾಜ್ಯದ ಹೆದ್ದಾರಿ ರಸ್ತೆಗಳನ್ನು ಗುಣಮಟ್ಟ ದಿಂದ ನಿರ್ಮಿಸಬೇಕೆಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ವಿಕಾಸಸೌಧದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿ ಸಭೆ ನಡೆಸಿ ಮಾತನಾಡಿ, ಕಳಪೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಗುತ್ತಿಗೆ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕೆಂದರು. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಕಾಲಮಿತಿಯಲ್ಲಿ ನಿಗದಿತ ವೆಚ್ಚದಲ್ಲಿ ಪೂರ್ಣಗೊಳಿಸಬೇಕು.

Advertisement

ಅನಗತ್ಯ ವೆಚ್ಚ, ಕಳಪೆ ಗುಣಮಟ್ಟ ಇದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕ್ಷೇತ್ರದ ಅಧಿಕಾರಿಗಳು ನಿರಂತರವಾಗಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸುತ್ತಿರಬೇಕು. ಕೆಳ ಹಂತದ ಎಂಜಿನಿಯರ್‌ಗಳನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಸೂಚಿಸಿದರು. ಸಭೆಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next