Advertisement
ಜು. 27ರಂದು ಸಂಚಲನ ಟ್ರಸ್ಟ್ ಹಾಗೂ ಉನ್ನತಿ ಕ್ಯಾರಿಯರ್ ಅಕಾಡೆಮಿ ಸಹಯೋಗದಲ್ಲಿ ಮಣಿಪಾಲದ ಮಣ್ಣಪಳ್ಳದಲ್ಲಿ ಜರಗಿದ ‘ಕಾರ್ಗಿಲ್ ವಿಜಯ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ನಿಸ್ವಾರ್ಥ ಸೇವೆ
ನಿವೃತ್ತ ಸೇನಾಧಿಕಾರಿಗಳ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷಡಾ| ಎಫ್.ಇ.ಎ ರೋಡ್ರಿಗಸ್ ಮಾತನಾಡಿ ಸೈನಿಕರ ಸೇವೆ ಶ್ರೇಷ್ಠವಾದುದು. ಅಂತೆಯೇ ಪೊಲೀಸ್, ಅರಣ್ಯ ಇಲಾಖೆಯವರು ಸೇರಿದಂತೆ ಯಾರು ತಮ್ಮ ಕೆಲಸವನ್ನು ನಿಸ್ವಾರ್ಥವಾಗಿ ನಿಷ್ಠೆಯಿಂದ ಮಾಡುತ್ತಾರೋ ಅದು ಕೂಡ ದೇಶ ಸೇವೆಯೇ ಎಂದು ಹೇಳಿದರು.
ನಿವೃತ್ತ ಸೇನಾಧಿಕಾರಿ ಮೇಜರ್ ಸುಬೇದಾರ್ ಗಣಪಯ್ಯ ಶೇರಿಗಾರ್, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನಿವೃತ್ತ ಸೇನಾನಿ ಜಗದೀಶ್ ಪ್ರಭು ಹಿರಿಯಡಕ, ನಿರ್ಮಿತಿ ಕೇಂದ್ರದ ಇಂಜಿನಿಯರ್ ವಿಜಯ ಕುಮಾರ್ ಶೆಟ್ಟಿ, ಉನ್ನತಿ ಅಕಾಡೆಮಿಯ ನಿರ್ದೇಶಕಿ ಪೌರ್ಣಮಿ ಪ್ರೇಮಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸಂಚಲನ ಟ್ರಸ್ಟ್ ಅಧ್ಯಕ್ಷ ಪ್ರೇಮ ಪ್ರಸಾದ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜೇತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಶ್ರಾವ್ಯಾ ಎಸ್.ಬಾಸ್ರಿ ಅವರು ದೇಶಭಕ್ತಿ ಗೀತೆಗಳನ್ನು ಹಾಡುತ್ತಿದ್ದಂತೆ ಪ್ರದೀಶ್ ಅವರು ವಿಜಯ್ ದಿವಸ್ ಸಂದೇಶ ಸಾರುವ ಚಿತ್ರ ಬಿಡಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಸಿಇಒ ವಿನೋದ್ ಕುಮಾರ್ ಅವರು ಮಾತನಾಡಿ, ಸ್ವಾತಂತ್ರ್ಯ ಅನಂತರ ನಡೆದ ಯುದ್ಧಗಳಲ್ಲಿ ಕಾರ್ಗಿಲ್ ಯುದ್ದ ವಿಶಿಷ್ಟ ಮತ್ತು ಮಹತ್ವವಾದುದು. ಸೈನಿಕರಿಗೆ ದೇಶದ ಭದ್ರತೆಯೊಂದೇ ಗುರಿ. ಸೈನಿಕರು ಯುವಜನರಿಗೆ ಸ್ಫ್ಪೂರ್ತಿ. ನಮ್ಮ ದೈನಂದಿನ ದಿನಗಳಲ್ಲಿ ಎದುರಾಗುವ ಸವಾಲುಗಳನ್ನು ಕೂಡ ಯಶಸ್ವಿಯಾಗಿ ಎದುರಿಸಲು ಸೈನಿಕರ ಹೋರಾಟ ನಮಗೆ ಪ್ರೇರಣೆಯಾಗಲಿ ಎಂದು ಹೇಳಿದರು.