Advertisement

ಜನಸಂಖ್ಯೆ ದೇಶಕ್ಕೆ ಹೊರೆಯಾಗದೆ ಸಂಪನ್ಮೂಲವಾಗಿ ಪರಿಗಣಿಸಲ್ಪಡಲಿ

12:41 AM Apr 20, 2023 | Team Udayavani |

ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಭಾರತ ವಿಶ್ವದಲ್ಲಿಯೇ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಷ್ಟ್ರವಾಗಿದೆ. ಈ ಮೂಲಕ ಭಾರತ ತನ್ನ ನೆರೆಯ ರಾಷ್ಟ್ರ ಚೀನವನ್ನು ಹಿಂದಿಕ್ಕಿದೆ. ಭೌಗೋಳಿಕ ವಿಸ್ತೀರ್ಣದಲ್ಲಿ ವಿಶ್ವದಲ್ಲಿ ಏಳನೇ ಸ್ಥಾನ ಹೊಂದಿರುವ ಭಾರತ ಈಗ 142.86 ಕೋಟಿ ಜನರನ್ನು ಹೊಂದುವ ಮೂಲಕ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಅವಲೋಕಿ ಸಿದಾಗ ಭಾರತದ ಪಾಲಿಗೆ ಇದೊಂದು ಧನಾತ್ಮಕ ಬೆಳವಣಿಗೆಯಾಗಲಿ, ಹೆಮ್ಮೆಯ ವಿಷಯವೇನಲ್ಲ. ಹಾಗೆಂದು ಇದು ದೇಶದ ಪಾಲಿಗೆ ಬಲುದೊಡ್ಡ ಹೊರೆ ಎಂದು ಭಾವಿಸಿ ಆತಂಕ ಪಡುವ ಪರಿಸ್ಥಿತಿಯೇನೂ ಸೃಷ್ಟಿಯಾಗಿಲ್ಲ. ಕಾರಣ ದೇಶದ ಒಟ್ಟಾರೆ ಜನಸಂಖ್ಯೆಯನ್ನು ಪರಿಗಣಿಸಿದಾಗ 25.40ಕೋಟಿ ಜನರು 15-24 ವರ್ಷದೊಳಗಿನವರಾಗಿದ್ದಾರೆ. ಇದು ದೇಶದ ಪಾಲಿಗೆ ಆಶಾದಾಯಕ ಮತ್ತು ಇಷ್ಟೊಂದು ಬೃಹತ್‌ ಪ್ರಮಾಣದ ಯುವ ಸಮುದಾಯವನ್ನು ಹೊಂದಿರುವುದು ಹೆಮ್ಮೆಯ ಸಂಗತಿಯೇ.

Advertisement

ಸದ್ಯ ಇಡೀ ವಿಶ್ವದ ಜನಸಂಖ್ಯೆಯಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಲ್ಲಿ ಬಹುತೇಕ ದೇಶಗಳಲ್ಲಿ ಜನನ ಪ್ರಮಾಣ ಇಳಿಕೆಯಾಗುತ್ತಲೇ ಬಂದಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವಿಚಾರದಲ್ಲಿ ಭಾರತವೂ ಹೊರತಾಗಿಲ್ಲ. ದಶಕಗಳ ಹಿಂದೆ ಚೀನದಲ್ಲಿ ಜನಸಂಖ್ಯೆ ಒಂದೇ ಸಮನೆ ಏರತೊ ಡಗಿದಾಗ ಅಲ್ಲಿನ ಸರಕಾರ ಜನಸಂಖ್ಯೆ ನಿಯಂತ್ರಣಕ್ಕಾಗಿ ಹಲವಾರು ಕಠಿನ ಕ್ರಮ ಗಳನ್ನು ಕೈಗೊಂಡಿತು. ಇದರ ಪರಿಣಾಮವಾಗಿ ಕಳೆದೊಂದು ದಶಕದಿಂದೀಚೆಗೆ ಚೀನದಲ್ಲಿ ಜನಸಂಖ್ಯೆ ಭಾರೀ ಇಳಿಕೆಯನ್ನು ಕಂಡಿದ್ದು ಇದರ ದುಷ್ಪರಿಣಾಮವನ್ನು ಇದೀಗ ಎದುರಿಸುತ್ತಿದೆ. ಜನನ ಪ್ರಮಾಣ ಇಳಿಮುಖವಾದ್ದರಿಂದ ಅಲ್ಲೀಗ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಿದ್ದು ಯುವ ಮಾನವ ಸಂಪನ್ಮೂಲ, ಶ್ರಮಿಕ ವರ್ಗದ ಕೊರತೆ ಎದುರಾಗಿದೆ. ಇದರಿಂದಾಗಿ ಇಡೀ ದೇಶದ ಆರ್ಥಿಕ, ಸಾಮಾ ಜಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳುಂಟಾಗಿದೆ.
ಒಟ್ಟಾರೆ ಜಾಗತಿಕ ಬೆಳವಣಿಗೆಗಳನ್ನು ಗಮನಿಸಿದಾಗ ಸದ್ಯದ ಮಟ್ಟಿಗೆ ಭಾರತ ಜನಸಂಖ್ಯೆ ನಿಯಂತ್ರಣದಲ್ಲಿ ಸಾಕಷ್ಟು ಪ್ರಗತಿಯನ್ನು ಕಂಡಿದ್ದರೂ ಕ್ರಮಿಸಬೇಕಾದ ಹಾದಿ ಇನ್ನೂ ಬಹಳ ದೂರವಿದೆ. ಹಾಗೆಂದು ಚೀನಾ ಜಾರಿಗೆ ತಂದಂಥ ಕಟ್ಟು ನಿಟ್ಟಿನ ಕ್ರಮಗಳಿಗೆ ಮುಂದಾದಲ್ಲಿ ಭಾರತ ಕೂಡ ಪ್ರತಿಕೂಲ ಪರಿಣಾಮಗಳಿಗೆ ತುತ್ತಾದೀತು. ಈ ಹಿನ್ನೆಲೆಯಲ್ಲಿ ಭಾರತ ಹಾಲಿ ಜಾರಿಯಲ್ಲಿರುವ ಜನಸಂಖ್ಯಾ ನಿಯಂತ್ರಣ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕು. ಹೇರಳವಾಗಿರುವ ಮಾನವ ಸಂಪನ್ಮೂಲ ಅದರಲ್ಲೂ ಯುವ ಸಂಪನ್ಮೂಲವನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕಿದೆ. ಯುವಜನರಿಗೆ ಕೌಶಲಭರಿತ ಶಿಕ್ಷಣ, ಗುಣಮಟ್ಟದ ಜೀವನ ನಡೆಸಲು ಅವಶ್ಯವಾದ ಉದ್ಯೋಗವನ್ನು ದೊರಕಿಸಿಕೊಟ್ಟಲ್ಲಿ ಇದಕ್ಕಿಂತ ದೊಡ್ಡ ಬಂಡವಾಳ ದೇಶದ ಪಾಲಿಗೆ ಮತ್ತೂಂದಿರಲಾರದು. ಆದರೆ ಇದನ್ನು ಸರಿಯಾಗಿ ಅರ್ಥೈಸಿಕೊಂಡು ಸಮರ್ಪಕ ಯೋಜನೆಗಳನ್ನು ಅನುಷ್ಠಾನ ಗೊಳಿಸುವ ಗುರುತರ ಹೊಣೆಗಾರಿಕೆ ಸರಕಾರಗಳದ್ದಾಗಿದೆ. ದುಡಿಯುವ ಕೈಗಳಿಗೆ ಅರ್ಹತೆಗ ನುಸಾರ ಕೆಲಸ ನೀಡಿದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಉತ್ಪಾದನೆ, ಆದಾಯ ವೃದ್ಧಿಯಾಗಿ ದೇಶದ ಸ್ವಾವಲಂಬನೆಯ ಕನಸು ನನಸಾಗಲು ಸಾಧ್ಯ.

ಇದು ನೈಸರ್ಗಿಕ ಸಂಪನ್ಮೂಲದ ಅತಿಯಾದ ಅವಲಂಬನೆಯಿಂದ ನಮ್ಮನ್ನು ಪಾರು ಮಾಡುತ್ತದೆ ಮಾತ್ರವಲ್ಲದೆ ಪರಿಸರದಲ್ಲೂ ಸಮತೋಲನ ಕಾಯ್ದು ಕೊಳ್ಳಲು ಸಾಧ್ಯ. ಇದೇ ವೇಳೆ ಜನಸಂಖ್ಯೆ ನಿಯಂತ್ರಣ ಕ್ರಮಗಳು ವ್ಯತಿರಿಕ್ತವಾದ ಪರಿಣಾಮ ಬೀರಿ ಇಡೀ ಸೃಷ್ಟಿಯ ಸಮತೋಲನಕ್ಕೆ ಭಂಗ ತಾರದಂತೆ ಎಚ್ಚರ ವಹಿಸುವುದು ಅತ್ಯಗತ್ಯ. ಒಟ್ಟಾರೆ ಜನಸಂಖ್ಯೆಯಲ್ಲಿ ಲಿಂಗಾನುಪಾತ, ವಯೋವಾರು ವರ್ಗ…ಹೀಗೆ ಪ್ರತಿಯೊಂದರ ಮೇಲೂ ನಿಗಾ ಇರಿಸಬೇಕು. ಜನಸಂಖ್ಯೆಯನ್ನು ಒಂದು ಹೊರೆ ಎಂದು ಪರಿಗಣಿಸುವ ಬದಲಿಗೆ ಅದೊಂದು ಸಂಪನ್ಮೂಲ ಎಂದು ಭಾವಿಸಿ ನಮಗಿ ರುವ ಸೀಮಿತ ಭೂಮಿ, ಆಹಾರ, ಪರಿಸರದೊಂದಿಗೆ ಸಮತೋಲಿತವಾಗಿ ಮುನ್ನಡೆಯುವುದರಲ್ಲಿ ದೇಶದ ಭವಿಷ್ಯ ಅಡಗಿದೆ.

Advertisement

Udayavani is now on Telegram. Click here to join our channel and stay updated with the latest news.

Next