Advertisement

ತಾಪಂ ಇಒಗಳು ಕೆಲಸದ ಶೈಲಿ ಬದಲಿಸಿಕೊಳ್ಳಲಿ

03:48 PM Sep 03, 2022 | Team Udayavani |

ರಾಯಚೂರು: ಜಿಲ್ಲೆಯ ಅಭಿವೃದ್ಧಿಗೆ ಅನೇಕ ಯೋಜನೆಗಳು ಬರುತ್ತಿದ್ದರೂ ಕಾರಣಾಂತರಗಳಿಂದ ಪ್ರಗತಿ ಕುಂಠಿತಗೊಂಡಿರುವುದು ಕಂಡು ಬರುತ್ತಿದೆ. ಇನ್ನು ಮುಂದೆ ಕೆಲಸಗಳು ಅನಗತ್ಯವಾಗಿ ವಿಳಂಬವಾಗದ ರೀತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕರ್ತವ್ಯ ಶೈಲಿ ಬದಲಿಸಿಕೊಳ್ಳುಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಯ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಈವರೆಗೂ ಅಗತ್ಯ ಸೌಲಭ್ಯಗಳು ಸರಿಯಾಗಿ ತಲುಪಿಲ್ಲ ಎನ್ನುವುದು ವಿಪರ್ಯಾಸ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ರಸ್ತೆ, ಬೀದಿ ದೀಪ ಅಳವಡಿಕೆ, ಒಳಚರಂಡಿ ಮತ್ತು ಸ್ವತ್ಛತೆಗೆ ಎಲ್ಲ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಪ್ರತಿ ಗ್ರಾಪಂಗಳಲ್ಲಿ ಪಿಡಿಒಗಳು ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ನಿಮ್ಮ ಸೇವೆ ಅನುಭವನ್ನು ಸಕರಾತ್ಮಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಯೋಜನೆಗಳನ್ನು ಸಕಾಲಕ್ಕೆ ಅನುಷ್ಠಾನ ಮಾಡಿದರೆ ಆ ಗ್ರಾಪಂ, ತಾಲೂಕು ಮತ್ತು ಜಿಲ್ಲೆಗೆ ಹೆಸರು ಬರುತ್ತದೆ ಎಂದರು.

ಕೆಲಸದಲ್ಲಿ ಯಾರು ಮೇಲು ಕೀಳಿಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ. ನಿಮ್ಮ ನಿಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ. ಅಧಿ ಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಸಮಯದಲ್ಲಿ ಕಚೇರಿಗಳಿಗೆ ತೆರಳಬೇಕು. ಅಶಿಸ್ತು ತೋರಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ನಿಮ್ಮ ವಿರುದ್ಧ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಹೀಗಾಗಿ ದೂರುಗಳು ಬರದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.

Advertisement

ಜಿಲ್ಲೆಯ 179 ಗ್ರಾಪಂಗಳ ಪೈಕಿ ಕೇವಲ ಬೆರಳಕೆ ಪಂಚಾಯತಿಗಳು ಮಾತ್ರ ಅಭಿವೃದ್ಧಿ ಆಗಿವೆ ಎನ್ನುವುದಲ್ಲ. ಎಲ್ಲ ಪಂಚಾಯತಿಗಳು ಅಭಿವೃದ್ಧಿ ಆಗಬೇಕೆಂಬ ದೃಢ ಸಂಕಲ್ಪ ಎಲ್ಲರಲ್ಲಿ ಬರಬೇಕು ಎಂದರು.

2021-22ನೇ ಸಾಲಿನಲ್ಲಿ ಬಾಕಿಯಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಮುಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಬೇಕು. ಜಿಲ್ಲೆಯಲ್ಲಿ ಮಾನವ ದಿನಗಳನ್ನು ಹೆಚ್ಚು ಸೃಜಿಸಬೇಕು. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ದಪಡಿಸಬೇಕು ಎಂದರು.

ಇದೇ ವೇಳೆ ತಾಲೂಕವಾರು ಸುದಿರ್ಘ‌ವಾಗಿ ಪ್ರಗತಿ ಪರಿಶೀಲನೆ ನಡೆಸಿದರು. ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮುಖ್ಯ ಯೋಜನಾಧಿಕಾರಿ ಡಾ| ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ನಾಗರಾಜ ಸೇರಿ ವಿವಿಧ ತಾಪಂ ಇಒಗಳು, ಪಿಡಿಒಗಳು, ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next