Advertisement

ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಲಿ

03:19 PM Jun 29, 2019 | Suhan S |

ಹಿರೇಕೆರೂರ: ಮಾದಕ ವ್ಯಸನದಿಂದ ವ್ಯಕ್ತಿ ಹಾಳಾಗುವ ಜತೆಗೆ ಕುಟುಂಬ ಮತ್ತು ಸಮಾಜದ ಸ್ವಾಸ್ಥ ್ಯಹಾಳು ಮಾಡುತ್ತದೆ. ಯುವ ಜನತೆ ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಂತ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದು ರಟ್ಟೀಹಳ್ಳಿ ಪೊಲೀಸ್‌ ಠಾಣೆಯ ಪಿಎಸ್‌ಐ ಬಿ.ಎಸ್‌.ಅರವಿಂದ ಹೇಳಿದರು.

Advertisement

ರಟ್ಟೀಹಳ್ಳಿಯ ಲಯನ್ಸ್‌ ಶಾಲಾ ಆವರಣದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಜನತೆ ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಕ್ಕಿಳಿಯುತ್ತಿದ್ದಾರೆ. ಪರಿಣಾಮ ಮಾನಸಿಕ ಖನ್ನತೆ, ನಿದ್ರಾ ಹೀನತೆಗಳಂಥ ಸಮಸ್ಯೆ ಎದುರಿಸುತ್ತಿದ್ದಾರೆ. ಅಲ್ಲದೆ ಅನೇಕ ಕಾಯಿಲೆಗಳಿಗೆ ತುತ್ತಾಗಿ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಶಾಲಾ ಕಾಲೇಜು ಮಟ್ಟದಲ್ಲಿ ಈ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಜೀವನದಲ್ಲಿ ಒಳ್ಳೆಯ ಹಾಗೂ ಕೆಟ್ಟ ಎಂಬ ಆಯ್ಕೆಗಳಿದ್ದು, ಅದರಲ್ಲಿ ಒಳ್ಳೆಯದನ್ನು ಆಯ್ಕೆ ಮಾಡಿಕೊಂಡು ನಿಮ್ಮ ತಂದೆ ತಾಯಿಯ ಕನಸು ನನಸು ಮಾಡಿ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಎಸ್‌.ಬಿ.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಜೀವನ ನಡೆಸಬೇಕು. ಆರೋಗ್ಯ ಕೆಟ್ಟು ಹೋದ ಬಳಿಕ ಚಿಂತಿಸಿ ಫಲವಿಲ್ಲ ಎಂದು ಹೇಳಿದರು.

ಲಯನ್ಸ್‌ ಕ್ಲಬ್‌ ಅಧ್ಯಕ್ಷ ಎನ್‌.ಸಿ.ಕಠಾರೆ, ಲಯನ್ಸ್‌ ಶಾಲೆಯ ಮುಖ್ಯ ಶಿಕ್ಷಕ ವಿ.ಎಸ್‌. ಅರ್ಕಾಚಾರಿ, ಎಂ.ಎಚ್. ಹರವಿಶೆಟ್ಟರ್‌, ಪೊಲೀಸ್‌ ಇಲಾಖೆ ಕುಮಾರ ಕೊಣ್ತಿ, ಬಾರ್ಕಿ ಸೇರಿದಂತೆ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next