Advertisement

ಭ್ರಷ್ಟಾಚಾರ ವಿರುದ್ದ ಹೋರಾಡೋಣ: ಡಿಸಿಎಂ ಅಶ್ವತ್ಥ ನಾರಾಯಣ

09:09 AM Sep 11, 2019 | Team Udayavani |

ಬೆಂಗಳೂರು: ಸಮಾಜದಲ್ಲಿ ಭ್ರಷ್ಟಾಚಾರ ತೀವ್ರವಾಗಿದ್ದು, ಜಾತಿ ಮೀರಿ ಭ್ರಷ್ಟಾಚಾರ ವಿರುದ್ದ ಹೋರಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬಂಧನ ವಿಚಾರದಲ್ಲಿ ಸಮಾಜದವರು ಶಾಂತಿಯುತವಾಗಿ ತಮ್ಮ ಭಾವನೆ ವ್ಯಕ್ತಪಡಿಸಲಿ. ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ವಿರುದ್ದ ಆಡಳಿತ ನಡೆಸಿದ್ದರು? ಈಗ ಜನರಿಗೆ ಹೋರಾಡುವಂತೆ ಕರೆ ಕೊಡುತ್ತಾರೆ. ನಾನು ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ನಾಯಕರಲ್ಲೂ ಮನವಿ ಮಾಡುತ್ತೇನೆ. ನಮ್ಮೆಲ್ಲರ ಹೋರಾಟ ಭ್ರಷ್ಟಾಚಾರ, ಬೇನಾಮಿ ಆಸ್ತಿ ವಿರುದ್ದ ಇರಬೇಕು ಎಂದು ಹೇಳಿದರು.

ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮಿ ನರಸಿಂಹ ಪೀಠಮ್ ಹರಿಹರ ಪುರ ಗುರುಗಳ ಚಾತುರ್ಮಾಸ ವೃತ ಗುರುವಂದನೆ ಕಾರ್ಯಕ್ರಮ ನಡೆಯಿತು ಉಪ ಮುಖ್ಯಮಂತ್ರಿಗಳಾದ ಡಾ ಸಿ ಎನ್ ಅಶ್ವಥ್ ನಾರಾಯಣ್ ಭಾವಹಿಸಿದರು.
ಮಹಾಲಕ್ಷ್ಮಿ ಲೇಔಟ್ ನ ಶ್ರೀ ಹೇಮಲತಾ ಗೋಪಾಲಯ್ಯ ದಂಪತಿಗಳು , ಮಠದ ಆಡಳಿತಾಧಿಕಾರಿ ಶ್ರೀ ರವಿಶಂಕರ್ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next