Advertisement

ಶ್ರೀಗಳ ಮಾರ್ಗದರ್ಶನದಲ್ಲಿ ಸಾಗೋಣ

06:40 AM Jan 22, 2019 | Team Udayavani |

ಹುಣಸೂರು: ಬನ್ನಿಕುಪ್ಪೆ ಮಾದಹಳ್ಳಿಮಠ ಗುರುಬೂದಿಸ್ವಾಮಿ ವಿದ್ಯಾಸಂಸ್ಥೆ ವತಿಯಿಂದ ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ಸಾಂಬಸಾದಶಿವಸ್ವಾಮೀಜಿ, ದೇಶ ಕಂಡ ಮಹಾನ್‌ ತಪಸ್ವಿ, ತ್ರಿವಿಧ ದಾಸೋಹಿಗಳಾದ ಡಾ.ಶಿವಕುಮಾರಸ್ವಾಮಿಗಳು ಒಂದು ಶತಮಾನವನ್ನು ಪೂರೈಸಿ ನಮ್ಮನ್ನು ಅಗಲಿದ್ದಾರೆ. ಅವರು ನಿಜಕ್ಕೂ ನಡೆದಾಡುವ ದೇವರೆಂದೇ ಪ್ರಸಿದ್ಧಿ ಹೊಂದಿದ್ದರು.

ಅವರ ಅಗಲಿಕೆಯಿಂದ ದೇಶದ ಕೋಟ್ಯಾಂತರ ವಿದ್ಯಾರ್ಥಿಗಳು, ಭಕ್ತರು, ಅಭಿಮಾನಿಗಳು ತಬ್ಬಲಿಗಳಾಗಿದ್ದಾರೆ. ಇವರ ಮಾರ್ಗದರ್ಶನವನ್ನು ದಾರಿ ದೀಪವಾಗಿಸಿಕೊಂಡು ಅವರು ತೋರಿಸಿದ ದಾರಿಯಲ್ಲಿ ನಾವು ಸಾಗೋಣ ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಶಿಕ್ಷಕ ವರ್ಗ, ಆಡಳಿತ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next