Advertisement
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಪ್ರದೇಶಕ್ಕೂ ನ್ಯಾಯ ಸಿಗಬೇಕು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ನಾನು ಬಿಡಲ್ಲ. ನಾನು ಸಿಎಂ ಆಗಿದ್ದಾಗ ಸಂಪುಟ ವಿಸ್ತರಣೆ ವೇಳೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೆ. ಈಗ ಸಮ್ಮಿಶ್ರ ಸರ್ಕಾರವಿದೆ. ಎಲ್ಲವನ್ನೂ ನೋಡಿಕೊಂಡು ಹೋಗಬೇಕಾಗುತ್ತದೆ’ ಎಂದರು.
ಬಾದಾಮಿ: ಎಲ್ಲ ಸಮಾಜದವರಿಗೆ ಒಂದು ಬಾರಿಯಾದರೂ ಮುಖ್ಯಮಂತ್ರಿ ಹುದ್ದೆಯ ಅವಕಾಶ ಬಂದೇ ಬರುತ್ತದೆ. ನಾವು ಕಾಯಬೇಕು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ಸಚಿವ ಸ್ಥಾನ ಪಡೆದು ಅಭಿವೃದ್ಧಿ ಮಾಡಬೇಕೆಂದಿಲ್ಲ. ಸಚಿವ ಸ್ಥಾನ ಇರದಿದ್ದರೂ ಅಭಿವೃದ್ಧಿ ಮಾಡುವ ಶಕ್ತಿಯಿದೆ ಎಂದರು.
Related Articles
ಸಚಿವರಾಗಬೇಕಾದವರು ನನ್ನ ಬೆಂಬಲಿಗರು. ಸರಕಾರ ಮುಂದಿನ ನಾಲ್ಕೂವರೆ ವರ್ಷ ಸುಭದ್ರವಾಗಿರುತ್ತದೆ ಎಂದರು.
Advertisement
ವಿಧಾನಪರಿಷತ್ ಸಭಾಪತಿ ಆಯ್ಕೆ ಹೈಕಮಾಂಡ್ ಕೈಗೊಂಡ ನಿರ್ಧಾರ. ನಾನು ಎಸ್.ಆರ್. ಪಾಟೀಲರ ಹೆಸರು ಸೂಚಿಸಿದ್ದೆ.ರಾಜಕೀಯದಲ್ಲಿ ಸಮಾಧಾನ, ಅಸಮಾಧಾನ ಎಂಬ ವಿಚಾರ ಇರುವುದಿಲ್ಲ. ಸಭಾಪತಿಯನ್ನು ಹೈಕಮಾಂಡ್ ನಿರ್ದೇಶನದಂತೆ ಆಯ್ಕೆ ಮಾಡಲಾಗಿದೆ.
● ಸಿದ್ದರಾಮಯ್ಯ, ಮಾಜಿ ಸಿಎಂ