Advertisement

ಕಾಂಗ್ರೆಸ್‌ ಮುಕ್ತ ರಾಜ್ಯವಾಗಿಸೋಣ

12:12 PM Jan 08, 2018 | Team Udayavani |

ಚಿಂಚೋಳಿ: ಮೀಸಲು ವಿಧಾನಸಭೆ ಮತಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಲು ಬಿಜೆಪಿ ಕಾರ್ಯಪ್ರವೃತ್ತವಾಗಿ ಕಾಂಗ್ರೆಸ್‌
ಮುಕ್ತ ರಾಜ್ಯವನ್ನಾಗಿ ಮಾಡಲು ಎಲ್ಲರೂ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಚಿಂಚೋಳಿ ವಿಧಾನಸಭೆ ಉಸ್ತುವಾರಿ ಔರಾದ ಶಾಸಕ ಪ್ರಭು ಚವ್ಹಾಣ ಹೇಳಿದರು.

Advertisement

ಪಟ್ಟಣದ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಏರ್ಪಡಿಸಿದ ಚಿಂಚೋಳಿ ಮಂಡಲ ಮತಕ್ಷೇತ್ರದ ತಾಲೂಕು ಬಿಜೆಪಿ ಬೂತ್‌ ಮಟ್ಟದ ಸಶಕ್ತೀಕರಣ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಭ್ರಷ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿಸಲು ಪಕ್ಷದ ಮುಖಂಡರ ಅಪೇಕ್ಷೆಯಂತೆ 150 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಪಣತೊಡಲಾಗಿದೆ ಎಂದು ಹೇಳಿದರು.

ತಾಲೂಕಿನ ಎಲ್ಲ 235 ಬೂತ್‌ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಿ ನಮ್ಮ ಗಮನಕ್ಕೆ ತರಬೇಕು. ಎಲ್ಲರೂ ಪಕ್ಷದ ಸಲಹೆ, ಸೂಚನೆ, ತತ್ವ-ಸಿದ್ಧಾಂತದಂತೆ ನಡೆಯಬೇಕು ಎಂದು ಸೂಚನೆ ನೀಡಿದರು ಮಾಜಿ ಸಚಿವ ಸುನೀಲ ವಲ್ಯಾಪುರೆ, ಬಿಜೆಪಿ ಹಿರಿಯ ಮುಖಂಡ ರಮೇಶ ಯಾಕಾಪುರ, ಜಿಪಂ ಕೃಷಿ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್‌ ಯಾಕಾಪುರ, ಜಿಪಂ ಮಾಜಿ ಸದಸ್ಯೆ ಶಶಿಕಲಾ ಟೆಂಗಳಿ, ಶರಣು ಮೊತಕಪಳ್ಳಿ ಮಾತನಾಡಿದರು. ಮುಕುಂದ ಕೊಡದೂರ, ಮಲ್ಲಿಕಾರ್ಜುನ ಪಾಟೀಲ ಹುಳಗೇರಾ, ಸಂಗಪ್ಪ ಪಾಲಾಮೂರ, ಭೀಮಶೆಟ್ಟಿ ಜಾಬಶೆಟ್ಟಿ, ರವಿಕುಮಾರ ಹುಸೇಬಾಯಿ, ಕಾಶಿನಾಥ ನಾಟೀಕಾರ, ಸುಭಾಶ ಸೀಳಿನ್‌ ಇದ್ದರು.

ತಾಲೂಕು ಬಿಜೆಪಿ ಅಧ್ಯಕ್ಷ ಭೀಮಶೆಟ್ಟಿ ಮುರಡಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರ ಬಿಜೆಪಿ ಘಟಕದ ಅಧ್ಯಕ್ಷ ಸಂತೋಷ ಗಡಂತಿ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next