Advertisement

Mysore; ಅದು ಹೇಗೆ ಮಹಿಷ ದಸರಾ ಮಾಡುತ್ತಾರೋ ನೋಡುತ್ತೇವೆ: ಶಾಸಕ ಟಿಎಸ್  ಶ್ರೀವತ್ಸ ಎಚ್ಚರಿಕೆ

02:17 PM Sep 08, 2023 | Team Udayavani |

ಮೈಸೂರು: ಮಹಿಷ ದಸರಾ ಮಾಡಲು ಬಿಡುವುದಿಲ್ಲ. ರಾತ್ರಿಯಿಡಿ ಮಲಗಿ ಮಹಿಷಾ ದಸರಾ ತಡೆಯುತ್ತೇವೆ ಎಂದು ಮೈಸೂರಿನಲ್ಲಿ ಬಿಜೆಪಿ ಶಾಸಕ ಟಿ ಎಸ್  ಶ್ರೀವತ್ಸ ಎಚ್ಚರಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ರಾತ್ರಿಯಿಡಿ ಮಲಗಿ ಮಹಿಷ ಆಚರಣೆ ತಡೆಯುತ್ತೇವೆ. ಸಾಂಸ್ಕೃತಿಕ ನಗರಿಯಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡುವುದಿಲ್ಲ. ಆಚರಣೆ ತಡೆಯಲು ಈಗಾಗಲೇ ರೂಪುರೇಷೆ ಸಿದ್ದಪಡಿಸುತ್ತಿದ್ದೇವೆ. ದಸರಾ ಸಂದರ್ಭದಲ್ಲಿ ಪೂಜೆ, ಪ್ರಸಾದ ಚಾಮುಂಡಿಗೆ ಮಾತ್ರ ಸಲ್ಲಬೇಕು. ಅದು ಹೇಗೆ ಮಹಿಷ ದಸರಾ ಮಾಡುತ್ತಾರೋ ನೋಡುತ್ತೇವೆ ಎಂದರು.

ಬಹುಸಂಖ್ಯಾತರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಹುಟ್ಟುಹಬ್ಬವನ್ನು ಬೇಕಾದರೆ ಸ್ಮಶಾನದಲ್ಲಿ ಮಾಡಿಕೊಳ್ಳಲಿ ಅದು ಅವರವರ ಇಷ್ಟ. ಆದರೆ ಈ ಕೆಟ್ಟ ಆಚರಣೆ ಮೂಲಕ ಬಹುಸಂಖ್ಯಾತರ ಭಾವನೆಗೆ ವಿರುದ್ಧ ನಿಂತಿದ್ದಾರೆ. ಬೇಕೆಂದರೆ ಅವರವರ ಮನೆಯಲ್ಲಿ ಮಹಿಷ ದಸರಾ ಆಚರಿಸಿಕೊಳ್ಳಲಿ. ಮಹಿಷ ದಸರಾ ಆಚರಣೆಯ ಹಿಂದಿನ ದಿನವೇ ನಾವೆಲ್ಲ ಚಾಮುಂಡಿಬೆಟ್ಟಕ್ಕೆ ತೆರಳಿ ಮಲಗುತ್ತೇವೆ. ಈ ಮೂಲಕ ಮಹಿಷ ದಸರಾ ಆಚರಣೆಗೆ ನಾವು ಬಿಡುವುದಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next