Advertisement

ಹುದ್ದೆ ವಿಭಜನೆಯಾಗಲಿ: ಎಚ್‌.ಕೆ.ಪಾಟೀಲ್‌

11:14 PM Jan 21, 2020 | Team Udayavani |

ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷ ನಾಯಕನ ಅಧಿಕಾರ ಹಂಚಿಕೆಯಾಗಲಿ ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಬ್ಬರಿಗೆ ಎರಡು ಹುದ್ದೆ ಸಿಗುವುದು ಬೇಡ.

Advertisement

ಮೈತ್ರಿ ಸರ್ಕಾರದಲ್ಲಿ ಹುದ್ದೆಗಳ ಹಂಚಿಕೆಯಾಗಿತ್ತು. ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಹುದ್ದೆಗಳನ್ನು ವಿಭಾಗಿಸಲಾಗಿತ್ತು. ಮಹಾರಾಷ್ಟ್ರದಲ್ಲೂ ಎರಡೂ ಹುದ್ದೆಗಳನ್ನು ಪ್ರತ್ಯೇಕಿಸಲಾಗಿತ್ತು. ಯುಪಿಎ ಹಾಗೂ ಮಹಾರಾಷ್ಟ್ರ ಮಾದರಿ ರಾಜ್ಯದಲ್ಲೂ ಅಧಿಕಾರ ಹಂಚಿಕೆಯಾಗಲಿ. ಕಾಂಗ್ರೆಸ್‌ ರಾಷ್ಟ್ರೀಯ ಪಕ್ಷವಾಗಿರುವುದರಿಂದ ದೇಶದ ಎಲ್ಲ ರಾಜ್ಯಗಳಿಗೂ ಒಂದೇ ಮಾದರಿ ಅನುಸರಿಸಬೇಕು ಎಂದು ಹೇಳಿದರು.

ಅದೇ ರೀತಿ ವಿಭಾಗವಾರು ಕಾರ್ಯಾಧ್ಯಕ್ಷರ ನೇಮಕ ಮಾಡುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಪ್ರಸ್ತಾಪವನ್ನು ವಿರೋಧಿಸಿದ ಅವರು, ನಾಲ್ಕು ಕಾರ್ಯಾಧ್ಯಕ್ಷರ ಅವಶ್ಯಕತೆಯಿಲ್ಲ. ಸಿದ್ದರಾಮಯ್ಯ ಅವರು ನಾಲ್ಕು ಕಾರ್ಯಾಧ್ಯಕ್ಷರು ಬೇಕು ಎಂದು ಕೇಳುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ಸ್ಥಾನವನ್ನು ಈಗಿರುವಂತೆ ಮುಂದುವರಿಸಿದರೆ ಸಾಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next