Advertisement

ಕೋವಿಡ್‌ ಕೇರ್‌ ಕೇಂದ್ರಗಳನ್ನು ಬೇಗ ಆರಂಭಿಸಲಿ: ಈಶ್ವರ್‌ ಖಂಡ್ರೆ

09:47 PM Jul 04, 2020 | Sriram |

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್‌ ಕೇರ್‌ ಕೇಂದ್ರಗಳನ್ನು ತೆರೆಯಲು ಹಾಸಿಗೆಗಳನ್ನು ಸಿದ್ದಪಡಿಸುತ್ತಿದೆ. ಈ ಕೆಲಸವನ್ನು ಮೂರು ತಿಂಗಳ ಹಿಂದೆಯೇ ಮಾಡಿದ್ದರೆ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮೊದಲ ಸರ್ವ ಪಕ್ಷದ ಸಭೆಯಲ್ಲಿಯೇ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ 5000 ಹಾಸಿಗೆಗಳ ಕೊವಿಡ್‌ ಕೇರ್‌ ಸೆಂಟರ್‌ ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದೆ ,

ಆದರೆ, ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಈಗಲಾದರೂ ತಡವಾಗಿಯಾದರೂ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಖಂಡ್ರೆ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next