Advertisement

ಎಚ್‌ಡಿಕೆ ವಿಧಾನಸಭೆಯಲ್ಲಿ ಮಾತನಾಡಲಿ: ಶೆಟ್ಟರ್‌

11:09 PM Feb 29, 2020 | Lakshmi GovindaRaj |

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಾವು ಹೇಳಬೇಕಾಗಿರುವುದನ್ನು ಟ್ವೀಟ್‌ ಮೂಲಕ ಹೇಳುವ ಬದಲು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ರಾಜ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

Advertisement

ರಾಜ್ಯದಲ್ಲಿ ರೈತರ ಸಾಲಮನ್ನಾಕ್ಕೆ ಮೀಸಲಿರಿಸಿದ ಹಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆಂದು ಟ್ವೀಟ್‌ ಮೂಲಕ ಟೀಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರಿಗೆ ಏನಾದರೂ ಸಂದೇಹ, ಪ್ರಶ್ನೆಗಳಿದ್ದರೆ ವಿಧಾನಸಭೆ ಅಧಿವೇಶನದಲ್ಲಿ ನೇರವಾಗಿ ಮುಖ್ಯಮಂತ್ರಿಯವರನ್ನೇ ಕೇಳಬಹುದು.

ಇದರ ಬದಲಾಗಿ ಟ್ವೀಟ್‌ ಮೂಲಕ ಹೇಳಿಕೆ ನೀಡುವುದು ಸರಿಯಲ್ಲ. ರೈತರ ಸಾಲಮನ್ನಾ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಯವರು ಸರಕಾರದ ನಿಲುವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next