Advertisement

ಜವಾಬ್ದಾರಿಯಿಂದ ಮಾತನಾಡಲಿ: ಈಶ್ವರಪ್ಪ

11:22 PM Jan 22, 2020 | Team Udayavani |

ಹಾಸನ: ಸಜೀವ ಬಾಂಬ್‌ ಪತ್ತೆ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪೊಲೀಸರ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿರುವುದು ದುರದೃಷ್ಟಕರ ವಿಚಾರ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಪೊಲೀಸರೇ ಈಗಲೂ ರಾಜ್ಯದಲ್ಲಿದ್ದಾರೆ.

Advertisement

ಬಿಜೆಪಿ ಸರ್ಕಾರ ಬಂದ ಮೇಲೆ ಹೊಸದಾಗಿ ಪೊಲೀಸರನ್ನು ನೇಮಕ ಮಾಡಿಲ್ಲ. ಆದರೂ ಮುಖ್ಯಮಂತ್ರಿಯಾಗಿದ್ದವರು ಪೊಲೀಸ್‌ ಇಲಾಖೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದಾದರೆ ನಾವು ಯಾವ ಸ್ಥಿತಿಗೆ ಹೋಗುತ್ತಿದ್ದೇವೆ ಎಂದು ಆತಂಕವಾಗುತ್ತಿದೆ. ಕುಮಾರಸ್ವಾಮಿಯವರು ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎಂಬ ಭಾವನೆ ಜನರಲ್ಲಿ ಬರುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next