Advertisement

ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯತ್ನವಾಗಲಿ

11:30 AM Oct 15, 2017 | Team Udayavani |

ಮಹಾನಗರ : ಯುವ ಶಕ್ತಿ ದೇಶದ ಶಕ್ತಿ. ಈ ಶಕ್ತಿ ಒಗ್ಗೂಡಿಸುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದು ಶಾಸಕ ಜೆ.ಆರ್‌.ಲೋಬೊ ಹೇಳಿದರು.ಜಪ್ಪಿನಮೊಗರು ವಾರ್ಡ್‌ ಯುವ ಕಾಂಗ್ರೆಸ್‌ ವಾರ್ಡ್‌ ಸಮಿತಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

Advertisement

ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯತ್ನದ ಲ್ಲಿ ನಾವು ಮುನ್ನಡೆಯುವ. ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಕಾಂಗ್ರೆಸ್‌ ಪಕ್ಷವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.

ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಮಾದರಿ ನಗರವನ್ನಾಗಿಸುವ. ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯಾಚರಿಸೋಣ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.

ನೂತನ ಪದಾಧಿಕಾರಿಗಳ ಪದಗ್ರಹಣ
ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮನ್ವಿತಾ ಅವರ ಮನೆಯವರಿಗೆ ಸಹಾಯಧನ ವಿತರಿಸಲಾಯಿತು. ಬ್ಲಾಕ್‌ ಅಧ್ಯಕ್ಷ ಸಲೀಂ ಪದಾಧಿಕಾರಿಗಳು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next