Advertisement

ಬರ ನೆರವು ಕೋರಿ ದೇಶಪಾಂಡೆ ಕೇಂದ್ರಕ್ಕೆ ಪತ್ರ

01:25 AM Jan 12, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಕೂಡಲೇ ಮುಂಗಾರು ಹಂಗಾಮಿಗೆ ಅನ್ವಯವಾಗುವ ಎನ್‌ಡಿಆರ್‌ಎಫ್ನ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರು ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Advertisement

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದಾದ ನಂತರ ಹಿಂಗಾರು ಮಳೆ ಕೂಡ ಕೈ ಕೊಟ್ಟು ಬೆಳೆಗಳೆಲ್ಲ ಒಣಗಿ ಹೊಗಿವೆ. ತುಂಬಾ ಗಂಭೀರವಾಗಿದ್ದು ರಾಜ್ಯದ ಒಟ್ಟು 176 ತಾಲೂಕುಗಳ ಪೈಕಿ 156 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

ಕೇಂದ್ರದಿಂದ 2,434 ಕೋಟಿ ರೂ. ನೆರವು ಕೋರಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮನವಿ ಸಲ್ಲಿಸಲಾಯಿತು. ನಂತರ ಕೇಂದ್ರ ತಂಡವು ರಾಜ್ಯಕ್ಕೆ ಬಂದು ಅಧ್ಯಯನ ನಡೆಸಿ ಹೋಯಿತು. ಸಮಿತಿಯ ವರದಿಯನ್ನು ಮುಂದಿನ ಕ್ರಮಕ್ಕಾಗಿ ಗೃಹ ಸಚಿವಾಲಯದ ಉನ್ನತ ಮಟ್ಟದ ಸಮಿತಿಗೆ ಶಿಫಾರಸು ಮಾಡಿರುವುದಾಗಿ ತಿಳಿದು ಬಂದಿದೆ.
 

Advertisement

Udayavani is now on Telegram. Click here to join our channel and stay updated with the latest news.

Next