Advertisement

Letter to Siddaramaiah; ಕೆಂಪಣ್ಣ ಆಯೋಗದ ವರದಿ ಬಹಿರಂಗ ಮಾಡಿ: ಸಿ.ಟಿ. ರವಿ

01:16 AM Aug 25, 2024 | Team Udayavani |

ಬೆಂಗಳೂರು: ಅರ್ಕಾವತಿ ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ| ಕೆಂಪಣ್ಣ ಆಯೋಗದ ವರದಿ ಬಹಿರಂಗಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಈ ಹಿಂದೆ ಕಾಂಗ್ರೆಸ್‌ ಸರಕಾರವಿದ್ದಾಗ ಸುಮಾರು 852 ಎಕರೆಯಷ್ಟು ಜಮೀನನ್ನು ಡಿನೋಟಿಫೈ ಮಾಡಿದೆ. ಇದರ ಮೊತ್ತ ಸುಮಾರು 8 ಸಾವಿರ ಕೋಟಿ ರೂ. ಆಗಬಹುದೆಂಬ ಅಂದಾಜಿದೆ. ಇಷ್ಟು ದೊಡ್ಡ ಮೊತ್ತದ ಹಗರಣ ಆಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಇರುವುದರಿಂದ ಕೆಂಪಣ್ಣ ಆಯೋಗವನ್ನು ನೇಮಿಸಲಾಗಿತ್ತು. ಆಯೋಗ ವರದಿ ನೀಡಿದ್ದು ಅದು ಜನಸಾಮಾನ್ಯರಿಗೆ ಲಭಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next