Advertisement

ಕೊಳಚೆ ನೀರು ಯೋಜನೆ ತಡೆಗೆ ಪ್ರಧಾನಿಗೆ ಪತ್ರ

06:30 AM Jan 12, 2018 | Team Udayavani |

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ರೂಪಿಸಿರುವ ಹೆಬ್ಟಾಳ-ನಾಗವಾರ ಸಂಸ್ಕರಿತ ತ್ಯಾಜ್ಯ ನೀರು ಯೋಜನೆ ವಿರುದ್ಧ ತಮ್ಮ ಹೋರಾಟ ಮುಂದುವರಿಸಿರುವ ಪ್ರಗತಿಪರ ಪರಿಸರ ಚಿಂತಕರ ವೇದಿಕೆ ಇದೀಗ ಕೊಳಚೆ ನೀರಿನ ಯೋಜನೆ ಕೈ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ.

Advertisement

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಪರಿಸರ ಚಿಂತಕರ ವೇದಿಕೆ ಜಿಲ್ಲಾಧ್ಯಕ್ಷ ಎ.ಟಿ.ಕೃಷ್ಣನ್‌, ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ರೂಪಿಸಿರುವ ಹೆಬ್ಟಾಳ- ನಾಗವಾರ ಕೊಳಚೆ ನೀರು ಚಿಕ್ಕಬಳ್ಳಾಪುರ, ಬೆಂಗಳೂರು
ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಜೀವ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕಳವಳ
ವ್ಯಕ್ತಪಡಿಸಿದರು. ವಿರೋಧದ ನಡುವೆಯೂ ಸರ್ಕಾರ ಸೆ.18 ರಂದು ಶಂಕುಸ್ಥಾಪನೆ ನೆರವೇರಿಸಿದೆ. ಇದರಿಂದ ಅಪಾಯಕಾದಿದೆ. ಕೂಡಲೇ ಹೆಬ್ಟಾಳ-ನಾಗವಾರ ವ್ಯಾಲಿ ಯೋಜನೆಗೆ ತಡೆ ನೀಡಬೇಕೆಂದು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next