Advertisement

High Court: ಹೈಕೋರ್ಟ್‌ನಲ್ಲಿ ಆತ್ಮಹತ್ಯೆ ಯತ್ನ: ಕೇಸ್‌ ದಾಖಲು

11:22 PM Apr 04, 2024 | Team Udayavani |

ಬೆಂಗಳೂರು: ಹೈಕೋರ್ಟ್‌ ಕಲಾಪದ ವೇಳೆ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠದ ಎದುರಲ್ಲೇ ರೇಜರ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮೈಸೂರು ಮೂಲದ ಚಿನ್ನಂ ಶ್ರೀನಿವಾಸ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಹೈಕೋರ್ಟ್‌ ಭದ್ರತಾ ವಿಭಾಗದ ಹೆಡ್‌ ಕಾನ್‌ಸ್ಟೆಬಲ್ ರಾಜು ಕೊಟ್ಟ ದೂರು ಆಧರಿಸಿ ಆತ್ಮಹತ್ಯೆಗೆ ಯತ್ನ ಹಾಗೂ ಇತರ ಆರೋಪಗಳಡಿ  ಶ್ರೀನಿವಾಸ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು, ಗುರುವಾರ ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಸಾಕಷ್ಟು ಭದ್ರತೆಯ ನಡುವೆಯೂ ರೇಜರ್‌ ಅನ್ನು ಹೇಗೆ ಕೋರ್ಟ್‌ ಆವರಣದೊಳಗೆ ತರಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next