Advertisement

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

05:50 PM Sep 20, 2024 | Team Udayavani |

ಮಂಗಳೂರು: ಜಮೀನಿನಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನು ಕೊಲೆ ಮಾಡಿದ ಅಣ್ಣನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರದಂದು ತೀರ್ಪು ನೀಡಿದ್ದಾರೆ.

Advertisement

ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಶಿಕ್ಷೆಗೊಳಗಾದವನು. ಈತ 2022ರ ಮೇ 10ರಂದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35) ಅವರನ್ನು ಮರದ ನೊಗದಿಂದ ಹೊಡೆದು ಕೊಲೆ ಮಾಡಿದ್ದ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದಿಯಾವರ್ ಅವರು ವಾದಿಸಿದ್ದರು.

ನ್ಯಾಯಾಲಯವು 17 ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದು ಅದರಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯೆ ಡಾ.‌ವರ್ಷಾ ಎ.ಶೆಟ್ಟಿ ಮತ್ತು ಎಫ್.ಎಸ್.ಎಲ್‌ ನ ಡಾ. ಗೀತಾಲಕ್ಷ್ಮೀ ಅವರ ಸಾಕ್ಷ್ಯ ಮಹತ್ವದ್ದಾಗಿತ್ತು ಎಂದು ಸರಕಾರಿ ಅಭಿಯೋಜಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next