Advertisement

ಶೀಲ ಶಂಕಿಸಿ ಪತ್ನಿಯ ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ‌. ದಂಡ

01:26 PM Aug 06, 2023 | Team Udayavani |

ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದವನಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

Advertisement

ತೊನಶ್ಯಾಳ ಗ್ರಾಮದ ಮಹಾದೇವ ಗಂಗಪ್ಪ ಹೊಸಮನಿ ಎಂಬವನೇ ಜೀವಾವಧಿ ಶಿಕ್ಷೆ ಹಾಗೂ ದಂಡದ ಶಿಕ್ಷೆಗೆ ಗುರಿಯಾದವ. ಶಿಕ್ಷೆಗೆ ಗುರಿಯಾಗಿರುವ ಮಹಾದೇವ ತನ್ನ ಪತ್ನಿಯ ಶಿಲ ಶಂಕಿಸಿ, 2017ರ ನವೆಂಬರ್ 19 ರಂದು ಸಂಜೆ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಸದರಿ ಘಟನೆ ಕುರಿತು ಕುಟುಂಬದವರು ಸಲ್ಲಿಸಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಜಿಲ್ಲಾ 4ನೇ ಅಧಿಕ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಧ್ವೇಶ ದಬೇರ ಅವರು ಸರ್ಕಾರದ ಅಭಯಿಯೋಜಕ ವಿ.ಜಿ.ಮಾಮನಿ ಅವರು ಸಲ್ಲಿಸಿ, ಸೂಕ್ತ ಸಾಕ್ಷಿಗಳನ್ನು ಹಾಜರು ಪಡಿಸಿದ್ದರು. ಸಾಕ್ಷಿಗಳನ್ನು ಪರಿಗಣಿಸಿ ಪತ್ನಿ ಹಂತಕನಿಗೆ ಜೀವಾವಧಿ ಶಿಕ್ಷೆ,1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next