Advertisement

ನಿವೃತ್ತ ಅಧಿಕಾರಿ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

01:26 PM Aug 17, 2022 | Team Udayavani |

ಬೆಂಗಳೂರು: ಎಂಟು ವರ್ಷಗಳ ಹಿಂದೆ ಬನಶಂಕರಿಯಲ್ಲಿ ನಿವೃತ್ತ ನ್ಯಾಯಾಂಗ ಅಧಿಕಾರಿ ರಾಘವೇಂದ್ರ(70) ಎಂಬುವರನ್ನು ಹತ್ಯೆಗೈದಿದ್ದ ಅಪರಾಧಿಗೆ 62ನೇ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ.

Advertisement

ಆಂಧ್ರಪ್ರದೇಶ ಮೂಲದ ರಾಮಾಂಜನೇಯ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ ರಾಮಾಂಜನೇಯ, ವಾರಕ್ಕೊಮ್ಮೆ ಇಟ್ಟಮಡುನ 10ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ರಾಘವೇಂದ್ರ ಮನೆಗೂ ಬಂದು ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ. ಈ ಮಧ್ಯೆ 2014ರ ಡಿ.17ರಂದು ರಾತ್ರಿ 8 ಗಂಟೆ ಸುಮಾರಿಗೆ ರಾಘವೇಂದ್ರ ಅವರ ಮನೆಗೆ ನುಗ್ಗಿದ ಆರೋಪಿ, ಸುತ್ತಿಗೆಯಿಂದ ರಾಘವೇಂದ್ರರ ತಲೆಗೆ ಹೊಡೆದು ಕೊಂದಿದ್ದ.

ಬಳಿಕ ಅದನ್ನು ತಡೆಯಲು ಬಂದ ಅವರ ಪತ್ನಿ ಸುಧಾರಿಗೂ ಹೊಡೆದಿದ್ದ. ಅಲ್ಲದೆ, ಸುಧಾ ಅವರ 30 ಗ್ರಾಂ ತೂಕದ ಚಿನ್ನದ ಸರ ಕದ್ದು ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿಯ ಕೃತ್ಯ ಸಾಕ್ಷ್ಯಗಳಿಂದ ಸಾಬೀತಾಗಿದ್ದು, ಅಪರಾಧಿ ಎಂದು ಘೋಷಿಸಿದೆ. ಅಲ್ಲದೆ, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next