Advertisement

Karnataka ರೈತರ ಬದುಕು ಆತಂಕದ ಸ್ಥಿತಿಗೆ ತಲುಪಿದೆ : ಸರಕಾರದ ವಿರುದ್ಧ ಯಡಿಯೂರಪ್ಪ ಕಿಡಿ

08:56 PM Nov 07, 2023 | Team Udayavani |

ಕೊರಟಗೆರೆ: ರಾಜ್ಯದಲ್ಲಿ ಬರ ನಿರ್ವಹಣೆ ಮಾಡುವಲ್ಲಿ ಮತ್ತು ರೈತರ ಕಷ್ಟಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿದರು.

Advertisement

ಅವರು ತಾಲ್ಲೂಕಿನ ಬೋಡಬಂಡೇನಹಳ್ಳಿ ಗ್ರಾಮದ ಹತ್ತಿರದ ರೈತರ ಜಮೀನುಗಳಲ್ಲಿ ಬರ ವಿಕ್ಷಣೆ ಮಾಡಿ ಮಾತನಾಡಿ ರಾಜ್ಯದಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ ರೈತರ ಬದುಕು ಆತಂಕ ಸ್ಥಿತಿ ತಲುಪಿದೆ, ಈ ಭಾಗದಲ್ಲಿ ಮುಸುಕಿನ ಜೋಳ, ಮೆಕ್ಕೆ ಜೋಳ, ರಾಗಿ, ನೆಲಕಡಲೇ, ತೊಗರಿ ಸೇರಿದಂತೆ ಎಲ್ಲಾ ಬೆಳೆಗಳು ಸಂಪೂರ್ಣ ಹಾಳಾಗಿದ್ದು ರೈತರು ಬೆಳೆ ಕಳೆದುಕೊಂಡು ಮೇವು ದೊರೆಯದೆ ಸಂಕಷ್ಟ ಸ್ಥಿತಿಯಲ್ಲಿ ಇದ್ದಾರೆ, ಅದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರದ ಯಾವುದೇ ಮಂತ್ರಿಗಳು ರೈತರ ಜಮೀನಿಗೆ ಬಂದು ಸ್ಥಳ ಪರಿಶೀಲನೆ ಮಾಡಿಲ್ಲ, ಬರ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ, ಮಂತ್ರಿಗಳು ಜನರು ಕೊಟ್ಟ ಅರ್ಜಿಯನ್ನು ತೆಗೆದುಕೊಂಡು ಹೋಗಿ ಅದಕ್ಕೆ ಯಾವುದೇ ಉತ್ತರವಾಗಲಿ ನೀಡುತ್ತಿಲ್ಲ ಪರಿಹಾರ ಒದಗುಸುತ್ತಿಲ್ಲ, ಇದರೊಂದಿಗೆ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರವು ಕೂಡಲೇ ರೈತರ ನೆರವಿಗೆ ಧಾವಿಸಿ ಬರ ಪರಿಹಾರ ನೀಡಬೇಕು ಇಲ್ಲದ್ದಿದಲ್ಲಿ ರಾಜ್ಯಾದ್ಯಂತ ರೈತರ ಪರ ಹೋರಾಟ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಸುರೇಶ್‌ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಹುಲಿನಾಯಕ್, ರಾಜ್ಯ ಮುಖಂಡ ಮರಿಸ್ವಾಮಿ, ಮಧುಗಿರಿ ಬಿಜೆಪಿ ಜಿಲ್ಲಾದ್ಯಕ್ಷ ಬಿ.ಕೆ.ಮಂಜುನಾಥ್, ತುಮಕೂರು ಅದ್ಯಕ್ಷ ಹೆಬ್ಬಕಾರವಿ, ಕೊರಟಗೆರೆ ತಾಲ್ಲೂಕು ಅದ್ಯಕ್ಷ ಎಸ್.ಪವನ್‌ಕುಮಾರ್, ಮುಖಂಡರುಗಳಾದ ಬಿ.ಹೆಚ್,ಅನಿಲ್‌ಕುಮಾರ್, ರುದ್ರೇಶ್, ವೆಂಕಟೇಶ್, ಚಂದ್ರಣ್ಣ, ಪ.ಪಂ ಸದಸ್ಯ ಪ್ರದೀಪ್‌ಕುಮಾರ್, ಮಾಜಿ ಸದಸ್ಯರುಗಳಾದ ರಂಗನಾಥ್, ಗೋವಿಂದರಾಜು, ಯುವ ಮುಖಂಡರುಗಳಾದ ಸ್ವಾಮಿ, ಗುರುದತ್, ರವಿಕುಮಾರ್, ನಂಜುಂಡಯ್ಯ ಸೇರಿದಂತೆ ಹಲವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next