Advertisement

ಚಿತ್ರದುರ್ಗದ ಮುರುಘಾ ಶರಣರಿಗೆ ಜೀವ ಬೆದರಿಕೆ?

11:43 AM Mar 21, 2017 | Harsha Rao |

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆದರೆ, ಮಠದ ಮೂಲಗಳು ಇತನ್ನು ನಿರಾಕರಿಸಿದ್ದು, ಅಂತಹ ಯಾವುದೇ ಘಟನೆ ಸಂಭವಿಸಿಲ್ಲವೆಂದು ತಿಳಿಸಿವೆ. ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿತ್ತು. ಇದನ್ನು ಗಮನಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ರಂಗರಾಜನ್‌ ಮುರುಘಾಮಠಕ್ಕೆ ತೆರಳಿ ಮುರುಘಾ ಶರಣರೊಂದಿಗೆ ಚರ್ಚಿಸಿದರು. ಬೆದರಿಕೆ ಹಾಕಿದವನ ಮೊಬೈಲ್‌ ಸಂಖ್ಯೆ ಮತ್ತಿತರ ಮಾಹಿತಿ ಪಡೆದರು ಎಂದು ಹೇಳಲಾಗುತ್ತಿದೆ. ಈ ಕುರಿತು ಎಸ್ಪಿ ಅವರನ್ನು ಸಂಪರ್ಕಿಸಿದಾಗ, ನಮಗೆ ಅಂತಹ ಯಾವುದೇ ದೂರು ಬಂದಿಲ್ಲ. ನಾನು ಮುರುಘಾ ಶರಣರನ್ನು ಬಹಳ ದಿನಗಳಿಂದ ಭೇಟಿಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರನ್ನು ಭೇಟಿ ಮಾಡಿದ್ದು ನಿಜ. ವೈಯಕ್ತಿಕವಾಗಿ ಭೇಟಿ ಮಾಡಿ ಮಾತನಾಡಿಸಿರುವೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಮಠದ ಸ್ಪಷ್ಟನೆ: ಮುರುಘಾ ಶರಣರಿಗೆ ಕೊಲೆ ಬೆದರಿಕೆಗೆ ಸಂಬಂಧಿಸಿದಂತೆ ಮುರುಘಾ ಮಠದಿಂದ ಸ್ಪಷ್ಟನೆ ನೀಡಲಾಗಿದೆ. ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ವ್ಯಕ್ತಿಯೊಬ್ಬ ಮುರುಘಾ ಶರಣರ ದೂರವಾಣಿಗೆ ಕರೆ ಮಾಡಿ, ನೀವು ಪರಿವರ್ತನಾ ಪರವಾದಿಗಳು ಎಂದು ಹೇಳಿಕೊಂಡು ಕೆಳ ಮತ್ತು ಮೇಲ್ವರ್ಗಗಳ ನಡುವೆ ಸಾಮಾಜಿಕ ಸಂಘರ್ಷ ತರುತ್ತಿದ್ದೀರಿ ಎಂದು ದೂಷಣೆ ಮಾಡುತ್ತ ಬೆದರಿಕೆ ಹಾಕಿದ ಕಾರಣ ಸದರಿ ವಿಷಯವನ್ನು ತನಿಖೆಗಾಗಿ ಪೊಲೀಸ್‌ ಇಲಾಖೆಗೆ ತಿಳಿಸಲಾಗಿದೆ ಎಂದು ಶ್ರೀಮಠವು ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next