Advertisement

Mumbai: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

07:08 PM Nov 26, 2023 | Team Udayavani |

ಭೋಪಾಲ/ಮುಂಬೈ: ದೇಶದ ಕೇಂದ್ರ ಭಾಗ ಮಧ್ಯಪ್ರದೇಶ ಮತ್ತು ಪಶ್ಚಿಮ ಭಾಗ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗಿದೆ. ಭಾನುವಾರ ಬೆಳಗ್ಗೆ ಮಹಾರಾಷ್ಟ್ರ ರಾಜಧಾನಿ ಮುಂಬೈ, ಪುಣೆ ಮತ್ತು ಪಾಲ್ಘರ್‌ನಲ್ಲಿ ಭಾರೀ ಮಳೆಯಾಗಿದೆ. ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಕಟ್ಟಡವೊಂದಕ್ಕೆ ಸಿಡಿಲು ಬಡಿದ ರಭಸಕ್ಕೆ ಬೆಂಕಿ ಹತ್ತಿಕೊಂಡಿದೆ.

Advertisement

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಮಧ್ಯಪ್ರದೇಶದ ನೈಋತ್ಯ ಭಾಗದ ಕೆಲವು ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಪ್ರಸಕ್ತ ಸಾಲಿನ ಚಳಿಗಾಲದಲ್ಲಿ ಮಧ್ಯಪ್ರದೇಶಕ್ಕೆ ಇದು ಮೊದಲ ಮಳೆಯಾಗಿದೆ. ಹೀಗಾಗಿ, ಭಾರತೀಯ ಹವಾಮಾನ ಇಲಾಖೆ ಆ ರಾಜ್ಯಕ್ಕೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next