Advertisement

ಲೈನ್‌ಮ್ಯಾನ್‌ ಸಾವು; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಮುತ್ತಿಗೆ

02:30 PM Dec 02, 2017 | Team Udayavani |

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಗ್ರಾಮದಲ್ಲಿ ವಿದ್ಯುತ್‌ ಕಂಬವೇರಿದ್ದ ಮೆಸ್ಕಾಂ ಲೈನ್‌ಮ್ಯಾನ್‌ವೋರ್ವ  ಆಯತಪ್ಪಿ ಬಿದ್ದು  ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರಕದೆ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದ್ದು,  ಘಟನೆ ಬಳಿಕ ಜಿಲ್ಲಾಸ್ಪತ್ರೆಗೆ ಮೆಸ್ಕಾಂ ನೌಕರರು ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದ್ದಾರೆ.

Advertisement

ಕಿರಿಯ ಲೈನ್‌ಮ್ಯಾನ್‌ ರವಿಕಿರಣ್‌ ಕಂಬದಿಂದ ಬಿದ್ದಿದ್ದು ತಲೆಗೆ ಗಂಭೀರ ಗಾಯವಾಗಿತ್ತು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ದೊರಕದ ಕಾರಣ ಸಾವನ್ನಪ್ಪಿದ್ದಾರೆ ಎಂದು ಸಹುದ್ಯೋಗಿಗಳು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ. 

ನೂರಾರು ಮೆಸ್ಕಾಂ ಲೈನ್‌ಮ್ಯಾನ್‌ಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ರವಿಕಿರಣ್‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

Advertisement

Udayavani is now on Telegram. Click here to join our channel and stay updated with the latest news.

Next