Advertisement

ಹನೂರು: ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದ ನೌಕರ ಆಯತಪ್ಪಿ ಕೆಳಗೆ ಬಿದ್ದು ಸಾವು

01:33 PM Jun 01, 2022 | Team Udayavani |

ಹನೂರು: ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದ ನೌಕರನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಸಂದನಪಾಳ್ಯ ಗ್ರಾಮದ ಬಳಿ ಬುಧವಾರ ನಡೆದಿದೆ.

Advertisement

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಪ್ರಶಾಂತ್ ಮೃತ ದುರ್ದೈವಿಯಾಗಿದ್ದು, ಈತ ಸೆಸ್ಕ್ ನಲ್ಲಿ ಪವರ್ ಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಬುಧವಾರ ಬೆಳಿಗ್ಗೆ 12 ಗಂಟೆ ಸಮಯದಲ್ಲಿ ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದಾಗ ಪ್ರಶಾಂತ್ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಗಾಯಾಳುವನ್ನು ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next