Advertisement

ನೀರಿನ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ

03:57 PM Apr 17, 2020 | Naveen |

ಲಿಂಗಸುಗೂರು: ತಾಲೂಕಿನಲ್ಲಿ ಕುಡಿಯುವ ಸಮಸ್ಯೆ ಉದ್ಭವಿಸಿದರೆ ಅದಕ್ಕೆ ನಿಮ್ಮನ್ನೇ ನೇರ ಹೊಣೆಯನ್ನಾಗಿ ಮಾಡಲಾಗುವುದು ಎಂದು ತಾಪಂ ಇಒ ಪಂಪಾಪತಿ ಹಿರೇಮಠ ಪಿಡಿಒಗಳಿಗೆ ಎಚ್ಚರಿಸಿದ್ದಾರೆ.

Advertisement

ತಾಪಂ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪಿಡಿಒ, ಜೆಇ, ಕಂದಾಯ ನಿರೀಕ್ಷಕರ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಭೀತಿ ಹಾಗೂ ಬೇಸಿಗೆ ಇರುವುದರಿಂದ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೇ ಸ್ಪಂದಿಸಬೇಕು. ಕಳೆದ ವರ್ಷ ಕುಡಿವ ನೀರಿನ ಸಮಸ್ಯೆ ಇದ್ದ ಗ್ರಾಮಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಒಂದು ವೇಳೆ ಹೊಸ ಬೋರ್‌ವೆಲ್‌ ಕೊರೆಯುವ ಅಗತ್ಯವಿದ್ದಲ್ಲಿ ಭೂ ವಿಜ್ಞಾನಿಗಳು ಸೂಚಿಸುವ ಕಡೆಗೆ ಬೋರ್‌ವೆಲ್‌ ಕೊರೆಸಬೇಕು. ಜಲ ಮೂಲಗಳು ಸಿಗದಿದ್ದಲ್ಲಿ ಖಾಸಗಿ ಬೋರ್‌ ವೆಲ್‌ಗ‌ಳಿಂದ ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿ ಎಂದರು. ಈ ವೇಳೆ ತಹಶೀಲ್ದಾರ್‌ ಚಾಮರಾಜ ಪಾಟೀಲ್‌, ಪಿಡಿಒ ಸೇರಿದಂತೆ ಕಂದಾಯ ನಿರೀಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next