Advertisement

ಲಿಂಗಾಯತ ಜಾತಿ ಉಲ್ಲೇಖ: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಆಯೋಗಕ್ಕೆ ದೂರು

11:00 PM Apr 23, 2023 | Team Udayavani |

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲಿಂಗಾಯತ ಜಾತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚುನಾವಣ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

Advertisement

ಲಿಂಗಾಯತ ಸಮುದಾಯದ ವಕೀಲ ಬಸವರಾಜ ಹಳ್ಳದ್‌ ಹಾಗೂ ಇತರರು ದೂರು ನೀಡಿದ್ದು, ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್‌ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಲ್ಲಿ ಕೋರಲಾಗಿದೆ.

ಸಿದ್ದು ವಿರುದ್ಧವೂ ರಾಹುಲ್‌ ಮಾದರಿ ರಾಹುಲ್‌ ಗಾಂಧಿ ಅವರನ್ನು ಕಟ್ಟಿಹಾಕಲು ಅನುಸರಿಸಿದ ತಂತ್ರವನ್ನೇ ಬಿಜೆಪಿ, ಸಿದ್ದರಾಮಯ್ಯ ವಿರುದ್ಧವೂ ಅನುಸರಿಸುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ರಾಹುಲ್‌ ಗಾಂಧಿ ಅವರು ಮೋದಿ ಸಮುದಾಯಕ್ಕೆ ಅಪಮಾನ ಮಾಡಿದಂತೆಯೇ ಸಿದ್ದರಾಮಯ್ಯ ಅವರು ಲಿಂಗಾಯತ ಸಮುದಾಯವನ್ನ ಅಪಮಾನಿಸಿದ್ದಾರೆ ಎಂದು ತಳುಕು ಹಾಕುವ ರೀತಿಯಲ್ಲಿ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ಚುನಾವಣ ಆಯೋಗಕ್ಕೆ ದೂರು ನೀಡಿರುವುದು ಇದಕ್ಕೆ ನಿದರ್ಶನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next