Advertisement

ಶೆಟ್ಟರ್‌ ವಿಚಾರದಲ್ಲಿ ಲಿಂಗಾಯತ ವಿವಾದ ಕೆಲಸ ಮಾಡಲ್ಲ: Arvind Bellad

09:45 PM Apr 25, 2023 | Team Udayavani |

ಹುಬ್ಬಳ್ಳಿ: ಐವತ್ತು ವರ್ಷದ ಇತಿಹಾಸದಲ್ಲಿ ಕೇವಲ ಒಂಭತ್ತು ತಿಂಗಳು ವೀರೇಂದ್ರ ಪಾಟೀಲ ಅವರಿಗೆ ಅಧಿಕಾರ ನೀಡಿ, ನಂತರ ಮನೆಗೆ ಕಳುಹಿಸಿದ್ದು ಕಾಂಗ್ರೆಸ್‌. ಆ ಪಕ್ಷದ ನಾಯಕರ ಹಕೀಕತ್ತು ಏನೆಂದು ರಾಜ್ಯದ ಜನರಿಗೆ ಗೊತ್ತಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಶಾಸಕ, ಹು-ಧಾ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ ವಿಚಾರದಲ್ಲಿ ಲಿಂಗಾಯತ ಫ್ಯಾಕ್ಟರ್‌ ಕೆಲಸ ಮಾಡುವುದಿಲ್ಲ. ಅಲ್ಲದೆ ಹು-ಧಾ ಕೇಂದ್ರ ಕ್ಷೇತ್ರದಲ್ಲಿ ಬಹಳ ಸ್ಟ್ರಾ ಟಜಿ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ಜನರು ತೀರ್ಮಾನಿಸಿದ್ದಾರೆ. ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಆಯ್ಕೆ ಮಾಡುತ್ತಾರೆ. ಪಕ್ಷದ ಅಭ್ಯರ್ಥಿ ಮಹೇಶ ಟೆಂಗಿನಕಾಯಿ 30 ಸಾವಿರಕ್ಕೂ ಹೆಚ್ಚು ಮತಗಳಿಂದ ಆರಿಸಿ ಬರುತ್ತಾರೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಹೇಳಿದ್ದಾರೆ. ನನಗೆ ಬೇರೆ ಬೇರೆ ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಳ್ಳಲೂ ಸೂಚಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next